Tuesday, January 27, 2026

ಯಶುಕುಮಾರ್ ಡಿ.ಕೃಷ್ಣಾಪುರ ಅಮ್ಟೂರು ಅವರಿಗೆ ಪಿ.ಎಚ್.ಡಿ.ಪದವಿ

ಬಂಟ್ವಾಳ: ಯಶುಕುಮಾರ್ ಡಿ.ಕೃಷ್ಣಾಪುರ ಅಮ್ಟೂರು ಅವರಿಗೆ ಪಿ.ಎಚ್.ಡಿ.ಪದವಿ ಲಭಿಸಿದೆ.

ತುಳುನಾಡಿನ ಅವಳಿವೀರರ ಆರಾಧನೆ: ಸಾಮಾಜಿಕ ಸಂಬಂಧ ಗಳು ಮತ್ತು ಚಾರಿತ್ರಿಕತೆ ಎಂಬ ವಿಷಯ ದ ಕುರಿತು ಮಂಡಿಸಿದ ಪ್ರಬಂಧ ಸಂಕಲನ ಕ್ಕೆ ಮಂಗಳೂರು ಮಹಾ ವಿಶ್ವವಿದ್ಯಾನಿಲಯ ಪಿ.ಎಚ್.ಡಿ.ಪದವಿ ನೀಡಿದೆ.
ಅಮ್ಟೂರು ಕ್ರಷ್ಟಾಪುರ ನಿವಾಸಿ ಭಾರತೀಯ ಸಂಚಾರ ನಿಗಮ ನಿಯಮಿತ ದಲ್ಲಿ ಉದ್ಯೋಗಿಯಾಗಿರುವ ದೇವದಾಸ ಕ್ರಷ್ಣಾಪುರ ಮತ್ತು ಸುಂದರಿ ಅವರ ಪುತ್ರನಾಗಿರುವ ಯಶುಕುಮಾರ್ ಡಿ. ಅವರು ಪ್ರಾಥಮಿಕ ಶಿಕ್ಷಣ ವನ್ನು ಸಂತ ಅಂತೋನಿಯವರ ಹಿರಿಯ ಪ್ರಾಥಮಿಕ ಶಾಲೆ ಅಮ್ಟೂರು, ಪ್ರೌಢಶಿಕ್ಷಣ ವನ್ನು ದೀಪಿಕಾ ಪ್ರೌಢ ಶಾಲೆ ಮೊಡಂಕಾಪು, ಪಿಯುಸಿ ಯನ್ನು ಬಿ.ಇ.ಎಂ.ಪಿ.ಯು.ಕಾಲೇಜು ರಥಬೀದಿ ಮಂಗಳೂರು , ಡಿಗ್ರಿ ಶಿಕ್ಷಣ ವನ್ನು ಮಂಗಳೂರು ಹಂಪಣಕಟ್ಟೆ ಕಾಲೇಜಿನಲ್ಲಿ ಹಾಗೂ ಸ್ನಾತಕೋತ್ತರ ಪದವಿ ಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಎಸ್.ವಿ.ಪಿ.ಕನ್ನಡ ಅಧ್ಯಯನ ಸಂಸ್ಥೆ ಯಲ್ಲಿ ಪಡೆದಿದ್ದಾರೆ.
ಪ್ರೋ.ಅಭಯಕುಮಾರ್ ಕೆ. ಅವರ ಮಾರ್ಗದರ್ಶನ ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ.ಕನ್ನಡ ಅಧ್ಯಯನ ಸಂಸ್ಥೆಯ ಲ್ಲಿ ಸಂಶೋಧನೆ ನಡೆಸಿ , ಮಹಾಪ್ರಬಂಧ ಸಿದ್ದಪಡಿಸಿ , ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಪಿ.ಎಚ್.ಡಿ.ಪದವಿ ಪಡೆದಿರುತ್ತಾರೆ.

ಅಭಿನಂದನೆ: ” ತುಳುನಾಡಿನ ಅವಳಿವೀರರ ಆರಾಧನೆ: ಸಾಮಾಜಿಕ ಸಂಬಂಧ ಗಳು ಮತ್ತು ಚಾರಿತ್ರಿಕತೆ” ಎಂಬ ವಿಷಯದಲ್ಲಿ ಪ್ರಬಂಧ ಸಂಕಲನ ಮಂಡಿಸಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ.ಪದವಿ ಪಡೆದ ಬಂಟ್ವಾಳ ತಾಲೂಕಿನ ಅಮ್ಟೂರು ಕೃಷ್ಣಾಪುರ ನಿವಾಸಿ ಯಶುಕುಮಾರ್ ಡಿ. ಅವರಿಗೆ ಮಾಜಿ ತಾ.ಪಂ.ಉಪಾಧ್ಯಕ್ಷ, ಬಿಜೆಪಿ ಎಸ್ .ಮೋರ್ಚಾದ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು ಅಭಿನಂದನೆ ಸಲ್ಲಿಸಿದ್ದಾರೆ.

More from the blog

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...