ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್-೧೯ ವಿರುದ್ಧ ಕಾರ್ಯ ನಿರ್ವಹಿಸಲು ಲಸಿಕೆ ವಿತರಣೆ ಶಿಬಿರದಲ್ಲಿ ಕ್ಷಿಪ್ರ ನೊಂದಾವಣೆಗಾಗಿ ಲ್ಯಾಪ್ಟಾಪ್ ವಿತರಣ ಕಾರ್ಯಕ್ರಮ ಪ್ರಾ.ಆ.ಕೇಂದ್ರದಲ್ಲಿ ಮಂಗಳವಾರ ನಡೆಯಿತು.


ಸಂಘದ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಉಡುಪ ಅವರು ಲ್ಯಾಪ್ ಟಾಪ್ ವಿತರಿಸಿ, ಕೊರೋನಾ ಸಂಕಷ್ಟದ ಕಾಲದಲ್ಲಿ ಜನರ ಪ್ರಾಣ ರಕ್ಷಣೆ ಮಾಡುವಲ್ಲಿ ಆಸ್ಪತ್ರೆಯ ವೈದ್ಯರು, ಸಿಬಂದಿಗಳ ಉತ್ತಮ ಸೇವೆ ಅಭಿನಂದನೀಯ ಎಂದು ಹೇಳಿದರು.
ಪ್ರಾ.ಆ.ಕೇಂದ್ರದ ವೈದ್ಯಾಽಕಾರಿ ಡಾ| ಸತೀಶ್ ಎಂ. ಸಿ. ಅವರು ಮಾತನಾಡಿ, ಕೊರೊನಾ ವಾರಿಯರ್ಸ್ರನ್ನು ಗುರುತಿಸಿ ಗೌರವಿಸಿದ್ದಲ್ಲದೆ, ಆರೋಗ್ಯ ರಕ್ಷಣೆಗಾಗಿ ಆಸ್ಪತ್ರೆಗೆ ವಿವಿಧ ಕೊಡುಗೆಗಳನ್ನು ನೀಡಿದ ಸಹಕಾರಿ ಸಂಘದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ವೈದ್ಯ ಡಾ.ರಿತೇಶ್ ಶೆಟ್ಟಿ, ಸಹಕಾರಿ ಸಂಘದ ಉಪಾಧ್ಯಕ್ಷ ಉಮೇಶ್ ಪೂಜಾರಿ, ನಿರ್ದೇಶಕರಾದ ಬೂಬ ಸಪಲ್ಯ, ಸುಂದರ ನಾಯ್ಕ, ಸೀತಾರಾಮ ಶೆಟ್ಟಿ ಸೇವಾ, ಸಂತೋಷ್ ಕುಮಾರ್ ಶೆಟ್ಟಿ, ನಾರಾಯಣ ಪೂಜಾರಿ, ಚಂದ್ರಶೇಖರ ಹೆಗ್ಡೆ, ಪಿ.ಎಂ.ಪ್ರಭಾಕರ,ದಿನೇಶ್ ಮೂಲ್ಯ, ಶಿವಯ್ಯ, ಸಂಘದ ಸಿಬಂದಿ ದೀಕ್ಷಿತ್, ಕಿರಿಯ ಆರೋಗ್ಯ ಸಹಾಯಕಿಯರು ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಾಹಣಾಽಕಾರಿ ಮಂಜಪ್ಪ ಮೂಲ್ಯ ಸ್ವಾಗತಿಸಿದರು. ಆರೋಗ್ಯ ಸಹಾಯಕ ಅನ್ವರ್ ಪಾಷಾ ವಂದಿಸಿದರು.












