ಬಂಟ್ವಾಳ: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರ ಪರವಾಗಿ ಜಿ.ಪಂ ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಪಿಲಾತಬೆಟ್ಟು ಗ್ರಾಮದಲ್ಲಿ ಮಂಗಳವಾರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳ ಕೇಂದ್ರದ ನರೇಂದ್ರ ಮೋದಿಯವರ ಜನಪರ ಆಡಳಿತದಿಂದಾಗಿ ಈ ಬಾರಿಯೂ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಶಾಂತಿ ಸಾಮರಸ್ಯದ ಭಯಮುಕ್ತ ಸಮಾಜದ ನಿರ್ಮಾಣಕ್ಕಾಗಿ ಈ ಬಾರಿ ಬಿಜೆಪಿಗೆ ಮತ ನೀಡ ಬೇಕೆಂದು ಅವರು ಮನವಿ ಮಾಡಿದರು.
ಬಿಜೆಪಿ ಪ್ರಮುಖರಾದ ಚಂದ್ರಶೇಖರ ಶೆಟ್ಟಿ ಕುಮಂಗಿಲ ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.