Friday, July 11, 2025

ಪಿಲಾತಬೆಟ್ಟುಗ್ರಾ.ಪಂ.: ಭಡ್ತಿಗೊಂಡ ಸಿಬಂದಿ ಆನಂದರಿಗೆ ಬೀಳ್ಕೊಡುಗೆ, ಸನ್ಮಾನ

 

ಬಂಟ್ವಾಳ: ಬಂಟ್ವಾಳ ತಾ. ಪಿಲಾತಬೆಟ್ಟು ಗ್ರಾ.ಪಂ. ನಲ್ಲಿ ಸುಮಾರು 25 ವರ್ಷಗಳ ಅವಧಿ ಬಿಲ್ಲು ವಸೂಲಿಗರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾ. ಪಂ. ಗೆ ಕಾರ್ಯದರ್ಶಿ ಗ್ರೇಡ್-2 ಹುದ್ದೆಗೆ ಭಡ್ತಿ ಹೊಂದಿದ ಆನಂದ ಅವರಿಗೆ ಪಿಲಾತಬೆಟ್ಟು ಗ್ರಾ.ಪಂ. ಹಾಗೂ ಗ್ರಾಮಸ್ಥರ ವತಿಯಿಂದ ಬೀಳ್ಕೊಡುಗೆ ಮತ್ತು ಸಮ್ಮಾನ ಕಾರ್ಯಕ್ರಮ ಗ್ರಾ.ಪಂ.ಕಚೇರಿಯಲ್ಲಿ ನಡೆಯಿತು.
ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಮಾತನಾಡಿ, ಪ್ರಾಮಾಣಿಕ, ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ಗ್ರಾಮಸ್ಥರ ಗೌರವಾದರ ಗಳಿಸಿದ ಆನಂದ ಅವರ ಸೇವೆ ಅನನ್ಯವಾದುದು. ಅವರಿಗೆ ಶುಭವಾಗಲಿ ಎಂದು ಶುಭ ಹಾರೈಸಿದರು. ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಮತ್ತಿತರರು ಶುಭ ಹಾರೈಸಿದರು. ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮಿ ಜೆ.ಬಂಗೇರ, ಮಾಜಿ ಅಧ್ಯಕ್ಷೆ ಭಾರತಿ ಶೆಟ್ಟಿ, ಪಂ.ಅ.ಅಧಿಕಾರಿ ರಾಜಶೇಖರ ರೈ, ಕಾರ್ಯದರ್ಶಿ ಜೋಯಲ್ ಪ್ರಶಾಂತ್ ಫೆಲೆರೊ,ಸದಸ್ಯರಾದ ಲಕ್ಷ್ಮೀ ನಾರಾಯಣ ಹೆಗ್ಡೆ, ಸರೋಜಾ ಶೆಟ್ಟಿ, ತು.ರ.ವೇ.ಬಂಟ್ವಾಳ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ, ಪಿಲಾತಬೆಟ್ಟು ಸಹಕಾರಿ ಸಂಘದ ನಿರ್ದೇಶಕ ಪಿ.ಎಂ.ಪ್ರಭಾಕರ,ಮೋಹನ ಸಾಲ್ಯಾನ್,ಹರೀಶ್ಚಂದ್ರ ಶೆಟ್ಟಿಗಾರ್, ಜಯರಾಜ ಅತ್ತಾಜೆ, ಅಂಗನವಾಡಿ, ಆಶಾ ಕಾರ್‍ಯಕರ್ತೆಯರು, ಪಂಚಾಯತ್ ಸಿಬಂದಿಗಳು ಉಪಸ್ಥಿತರಿದ್ದರು.

More from the blog

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...