Wednesday, February 12, 2025

ಪಿಲಾತಬೆಟ್ಟು ವ್ಯ.ಸೇ.ಸ.ಸಂಘ ಚುನಾವಣೆ ಸಹಕಾರ ಭಾರತಿ ಬೆಂಬಲಿತ ಸದಸ್ಯರ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ ಪುಂಜಾಲಕಟ್ಟೆ ಇದರ ಆಡಳಿತ ಮಂಡಳಿಗೆ ಚುನಾವಣೆಯು ಜ.25ರಂದು ಸಂಘದ ಕಚೇರಿ ಕಟ್ಟಡದಲ್ಲಿ ನಡೆಯಿತು.
ಸಹಕಾರ ಭಾರತಿ ಬೆಂಬಲಿತ, ದ.ಕ. ಮತ್ತು ಉಡುಪಿ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮಿ ನಾರಾಯಣ ಉಡುಪ ಮತ್ತು ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರ ನೇತೃತ್ವದ ಸ್ಫರ್ಧಿಗಳು ಜಯಗಳಿಸಿದ್ದು, ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.
ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 26 ಮಂದಿ ಅಭ್ಯರ್ಥಿಗಳು ಸ್ಫರ್ಧಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಸರ್ಧೆ ನಡೆದಿತ್ತು. ಈ ಹಿಂದೆ ಕಳೆದ 30 ವರ್ಷಗಳಿಂದ ನಿರಂತರ ಬಿಜೆಪಿ ಬೆಂಬಲಿತ ಸದಸ್ಯರು ಆಡಳಿತ ನಡೆಸಿದ್ದು, ಈ ಬಾರಿಯೂ ಆಡಳಿತವನ್ನು ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಸಾಮಾನ್ಯ ಸ್ಥಾನದಿಂದ ಬೂಬ ಸಪಲ್ಯ, ಸೀತಾರಾಮ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ನಾರಾಯಣ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಲಕ್ಷ್ಮಿ ನಾರಾಯಣ ಉಡುಪ, ಉಮೇಶ್ ಪೂಜಾರಿ, ಪ್ರಭಾಕರ ಪಿ. ಎಂ., ಮಹಿಳಾ ಸ್ಥಾನದಿಂದ ಹರ್ಷಿಣಿ, ಸರೋಜಾ ಡಿ. ಶೆಟ್ಟಿ, ಪ.ಜಾತಿ ಸ್ಥಾನದಿಂದ ಶಿವಯ್ಯ, ಪ. ಪಂಗಡದಿಂದ ಸುಂದರ ನಾಯ್ಕ, ಸಾಲಗಾರರಲ್ಲದ ಸ್ಥಾನದಿಂದ ದಿನೇಶ್ ಮೂಲ್ಯ ಅವರು ಆಯ್ಕೆಯಾಗಿದ್ದಾರೆ.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧಿಕಾರಿ ಎನ್. ಜೆ. ಗೋಪಾಲ್ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.

More from the blog

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...