Wednesday, June 25, 2025

ಜೂ. 10 ರಿಂದ ಪಿಲಿಕುಳ ನಿಸರ್ಗಧಾಮ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ

ಮಂಗಳೂರು: ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಜೂ. 10 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ ಎಂದು ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ಕೋವಿಡ್-19 ನಿಯಂತ್ರಣದ ಹಿನ್ನೆಲೆ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಎಲ್ಲಾ ವಿಭಾಗಗಳನ್ನು ಕಳೆದ ಮೂರು ತಿಂಗಳಿಂದ ಮುಚ್ಚಲಾಗಿದ್ದು, ಈಗ ಸರ್ಕಾರದ ಆದೇಶ ಅನುಸರಿಸಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿಯ ಎಲ್ಲಾ ಸೂಚನೆಗಳನ್ನು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ, ಎಸ್‍ಒಪಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತುಗೊಳಪಟ್ಟು ಜೂನ್ 10 ರಿಂದ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಜೈವಿಕ ಉದ್ಯಾನ, ಲೇಕ್ ಗಾರ್ಡನ್, ಸಂಸ್ಕೃತಿ ಗ್ರಾಮ, ಆರ್ಬೋರೇಟಮ್ ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಾದೇಶಿಕ ವಿ.ಜ್ಞಾನ ಕೇಂದ್ರ ಮತ್ತು ತಾರಾಲಯವನ್ನು ಈಗ ತೆರೆಯದೆ ಮುಂದಿನ ದಿನಗಳಲ್ಲಿ ಸರ್ಕಾರದ ಆದೇಶವನ್ನು ಅನುಸರಿಸಿ ತೆರೆಯಲಾಗುತ್ತದೆ. ಪ್ರತೀ ಸೋಮವಾರ ವಾರದ ರಜೆ ಇರುತ್ತದೆ.
ಸಾರ್ವಜನಿಕರು ಪಿಲಿಕುಳ ನಿಸರ್ಗಧಾಮದ ಆಕರ್ಷಣೆಗಳನ್ನು ವೀಕ್ಷಿಸಲು ಭೇಟಿ ನೀಡುವ ಸಮಯದಲ್ಲಿ ಈ ಪಾಲಿಸಬೇಕಾದ ಸೂಚನೆಗಳು ಇಂತಿವೆ:-

ಎಲ್ಲಾ ಸಂದರ್ಭಗಳಲ್ಲಿ ಕನಿಷ್ಠ 6 ಅಡಿ ಭೌತಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಸಂದರ್ಶಕರು ಮುಖಗವಸನ್ನು (ಮಾಸ್ಕ್) ಧರಿಸಲೇಬೇಕು. ಧರಿಸದಿದ್ದವರಿಗೆ ಪ್ರವೇಶವಿರುವುದಿಲ್ಲ. ಎಲ್ಲಾ ಸಂದರ್ಶಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ತಪಾಸಣೆ ಮಾಡಲಾಗುತ್ತದೆ. ಸಂದರ್ಶಕರ ದೇಹದ ಉಷ್ಣತೆಯು ಮಿತಿಗಿಂತ ಹೆಚ್ಚಿದ್ದರೆ ಅಂತಹ ವ್ಯಕ್ತಿಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತದೆ. ಯಾವುದೇ ಸಂದರ್ಶಕರಿಗೆ ಜ್ವರ, ಕೆಮ್ಮು, ಶೀತ, ಗಂಟಲುನೋವು ಅಥವಾ ಉಸಿರಾಟದ ತೊಂದರೆ ಇದ್ದರೆ ಅಂತಹ ವ್ಯಕ್ತಿಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತದೆ. ಲೇಕ್‍ನಲ್ಲಿ ಮಕ್ಕಳ ಆಟಕ್ಕೆ ಅವಕಾಶವಿರುವುದಿಲ್ಲ ಎಂದು ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...