Thursday, June 26, 2025

’ಪ್ಲಾಸ್ಟಿಕ್ ಬ್ಯಾನರ್ ತೆರವುಗೊಳಿಸುವುದರಲ್ಲಿ ತಾರತಮ್ಯ ಯಾಕೆ..’ ವಿಟ್ಲ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ಅಸಮಾಧಾನ

ವಿಟ್ಲ: ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಪೇಟೆಯೆಲ್ಲೆಡೆ ಪ್ಲಾಸ್ಟಿಕ್ ಸಿಗುತ್ತದೆ. ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬ್ಯಾನರ್ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ವಿಟ್ಲ ನಾಲ್ಕು ಮಾರ್ಗ ಸೇರುವ ಜಂಕ್ಷನ್‌ನಲ್ಲಿ ಹಾಕಿರುವ ಬ್ಯಾನರನ್ನು ತೆರವುಗೊಳಿಸುತ್ತಿಲ್ಲ. ಬ್ಯಾನರ್‌ಗಳಿಗೆ ನಿರ್ದಿಷ್ಟ ಅವಧಿಯನ್ನು ನೀಡಿದ ಬಳಿಕ ತೆರವುಗೊಳಿಸಬೇಕು. ಅದು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕಡೆಗೂ ಒಂದೇ ರೀತಿ ಅನ್ವಯವಾಗಬೇಕು ಎಂದು ಪ.ಪಂ.ಸದಸ್ಯ ರವಿಪ್ರಕಾಶ್ ಮತ್ತು ಮಂಜುನಾಥ ಕಲ್ಲಕಟ್ಟ ಆಕ್ಷೇಪಿಸಿದರು.
ಅವರು ಸೋಮವಾರ ವಿಟ್ಲ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷೆ ದಮಯಂತಿ ವಹಿಸಿದ್ದರು.
ಸದಸ್ಯರ ಮೇಲಿನ ಮಾತಿಗೆ ಮಾಜಿ ಅಧ್ಯಕ್ಷ ಅರುಣ್ ಎಂ.ವಿಟ್ಲ ಹಾಗೂ ಇತರ ಸದಸ್ಯರೂ ಸಹ ಸಹಮತ ವ್ಯಕ್ತಪಡಿಸಿದರು. ಪ.ಪಂ. ಮುಖ್ಯಾಧಿಕಾರಿ ಮಾಲಿನಿ ಅವರು ಕ್ರಮಕೈಗೊಳ್ಳುವ ಭರವಸೆ ನೀಡಿದರು. ಪ್ಲಾಸ್ಟಿಕ್ ಅತೀ ಹೆಚ್ಚು ಸಂಗ್ರಹಿಸಿ ನೀಡುವವರಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಅವರು ಪ್ರಕಟಿಸಿದರು.
ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ಪುರಸಭೆ ನಿಧಿಯಲ್ಲಿ ಕೊರತೆ ಕಾಣುವಂತಾಗಬಾರದು. ಕಾಮಗಾರಿಗಳನ್ನು ನಿಗದಿತ ವೆಚ್ಚವನ್ನು ಮೀರಿ ಮಾಡುವಂತಾಗಬಾರದು. ನಿವೇಶನರಹಿತರಿಗೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವವರಿಗೆ ನಿವೇಶನ ನೀಡುವ ಬಗ್ಗೆ ಕ್ರಮಕೈಗೊಳ್ಳಬಹುದು ಎಂದು ಸಲಹೆ ನೀಡಿದರು.
ಸದಸ್ಯ ರಾಮದಾಸ ಶೆಣೈ ಮತ್ತು ಶ್ರೀಕೃಷ್ಣ ವಿಟ್ಲ ಅವರು ಮಾತನಾಡಿ, ಪ.ಪಂ. ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಯಾಗುತ್ತಿಲ್ಲ. ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ತೆರಳುವ ಮಾರ್ಗದಲ್ಲಿ ಕಸ, ಪ್ಲಾಸ್ಟಿಕ್ ರಾಶಿಯಿದೆ. ವಿಟ್ಲ ಪೇಟೆಯ ಚರಂಡಿಗಳು ಸಮರ್ಪಕವಾಗಿಲ್ಲ. ಗಬ್ಬುನಾತ ಬೀರುತ್ತಿದೆ. ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತಾಗಬಾರದು ಎಂದರು.
ಸದಸ್ಯ ಲೋಕನಾಥ ಶೆಟ್ಟಿ ಕೊಲ್ಯ ಅವರು ಮಾತನಾಡಿ, ಕಲ್ಲಕಟ್ಟ ಸೇತುವೆಯ ಬಳಿ ಕಸ ಹಾಕಲಾಗುತ್ತಿದೆ. ಲಾರಿಯಲ್ಲಿ ಮಣ್ಣು ಕೂಡಾ ತಂದು ಸುರಿಯಲಾಗುತ್ತದೆ. ಅದರ ಬಗ್ಗೆ ವಿಚಾರಿಸಿದರೆ ಪಂಚಾಯಿತಿ ಸಿಬ್ಬಂದಿ ಸೂಚಿಸಿದ ಜಾಗದಲ್ಲೇ ಸುರಿಯುತ್ತಿದ್ದೇವೆ ಎಂದು ಉತ್ತಿರಿಸುತ್ತಾರೆ. ಪಂಚಾಯಿತಿ ಸಿಬ್ಬಂದಿ ಇದನ್ನೆಲ್ಲ ನಿಭಾಯಿಸುವ ಅಧಿಕಾರ ಹೊಂದಿದ್ದಾರೆಯೇ,,ಹಾಗಾದರೆ ಸದಸ್ಯರಿಗೇನು ಕೆಲಸ ಎಂದು ಪ್ರಶ್ನಿಸಿದರು.
ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಸದಸ್ಯರಾದ ರಾಮದಾಸ ಶೆಣೈ, ಚಂದ್ರಕಾಂತಿ ಶೆಟ್ಟಿ, ಅಬ್ದುಲ್‌ರಹಿಮಾನ್ ನೆಲ್ಲಿಗುಡ್ಡೆ, ಸುನಿತಾ ಕೋಟ್ಯಾನ್, ಗೀತಾ ಪುರಂದರ, ಲತಾ ಅಶೋಕ್, ಸಂಧ್ಯಾ ಮೋಹನ್, ಇಂದಿರಾ ಅಡ್ಡಾಳಿ, ಎಂಜಿನಿಯರ್ ಶ್ರೀಧರ್, ರತ್ನಾ ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...