Monday, January 26, 2026

ನಾಳೆ ಪ್ರಧಾನ ಮಂತ್ರಿಗಳಿಂದ ರೂ. 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

 

ಮಂಗಳೂರು, ಸೆ.1(ಕ.ವಾ):-ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ ಎಂಟು ಯೋಜನೆಗಳ ಲೋಕಾರ್ಪಣೆ, ಶಿಲನ್ಯಾಸ ನೆರವೇರಿಸುವರು.

ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್ VI ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (ರೂ. 677 ಕೋಟಿ) ಗಳು ಸೇರಿವೆ.

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ. 100 ಕೋಟಿ), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ. 100 ಕೋಟಿ) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಹಾಗೂ ಶಂತನು ಠಾಕೂರ್ ಭಾಗವಹಿಸುವರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...