Tuesday, July 8, 2025

ಪೊಳಲಿ ಚೆಂಡು ಪ್ರಾರಂಭ (ಅಮ್ಮುಂಜೆ ಮಣೇಲ್ ಚೆಂಡ್ಗ್ ದುಂಬುಬಲೇ ಮಲ್ಲೂರು ಬೊಳ್ಳೂರು ಒರ್ಮೆಡ್‌ಚೆಂಡ್ಗ್ ಜಪ್ಪುಲೇ)

ಕೈಕಂಬ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವದ ಪ್ರಥಮ ಚೆಂಡಿನ ಉತ್ಸವ ಏ.೬ರಂದು ಶನಿವಾರ ಪ್ರಾರಂಭಗೊಂಡಿತು.

ದೇವಳದ ತಂತ್ರಿಗಳು ,ಅರ್ಚಕರು, ಆಡಳಿತಮಂಡಳಿಯ ಮೊಕ್ತೇಸರರು ಹಾಗೂ ದೇವಳದ ಪ್ರಮುಖರಾದವರು ದೇವಿಯಲ್ಲಿ ಪ್ರಾರ್ಥಿಸಿ ಅಮ್ಮುಂಜೆ ಮತ್ತು ಉಳಿಪಾಡಿಗುತ್ತಿನವರು. ಮೂಡಬಿದ್ರೆ ಚೌಟರ ಸೀಮೆಯ ಪದ್ಮನಾಭ ಚಮಗಾರ ತಯಾರಿಸಿಕೊಟ್ಟ ಸುಮಾರು ೧೮ ಕೇಜಿ ಭಾರದ ಬ್ರಹದ್ಖಾರದ ಚೆಂಡನ್ನು ಕೊಂಬು ಬ್ಯಾಂಡ್ ವಾಲಗದೊಂದಿಗೆ ಮೆರವಣಿಗೆಯಲ್ಲಿ ಪವಿತ್ರವಾದ ಚೆಂಡಿನಗದ್ದೆಗೆ ತರಲಾಗುವುದು.ಗದ್ದೆಯ ಉತ್ತರದಿಕ್ಕಿನ ಸುಲ್ತಾನ್ ಕಟ್ಟೆಯ ಬಳಿ ನಿಂತ ಅಮ್ಮುಂಜೆ ಹಾಗೂ ಉಳಿಪಾಡಿಗುತ್ತಿನವರನ್ನು ಸ್ವಾಗತಿಸಿ ಚೆಂಡಿನ ಮಧ್ಯ ಭಾಗಕ್ಕೆ ಕರೆದುಕೊಂಡು ಬಂದು ಮಟ್ಟಿ ಜೋಗಿಮನೆತನದವರು ಚೆಂಡಿನ ಆಟ ಸುರುಮಾಡಲು ಈರೀತಿ ಕರೆಯುತ್ತಾರೆ. “ಅಮ್ಮುಂಜೆ ಮಣೇಲ್ ಚೆಂಡ್ಗ್ ದುಂಬುಬಲೇ ಮಲ್ಲೂರು ಬೊಳ್ಳೂರು ಚೆಂಡ್ಗ್ ಓರ್ಮೆಡ್ ಜಪ್ಪುಲೆ “ಎಂದು ಹೇಳಿದಾಗ ಚೆಂಡುಹಿಡಿದಿದ್ದ ಗಾಣಿಗ ಮನೆತನದವರು ಚೆಂಡನ್ನು ಪರ್ದಖಂಡದ ಮನೆತನದವರಿಗೆ ಕೊಡುತ್ತಾರೆ.ಆಗ ಅವರು ಚೆಂಡನ್ನು ಹಾರಿಸಿ ಎಸೆಯುತ್ತಾರೆ. ಆಗ ಮಳಲಿ ಅಮ್ಮುಂಜೆ ಮಳಲಿ ಕಡೆಯ ಯುವಕರು , ಮಕ್ಕಳು ಚೆಂಡಾಟದಲ್ಲಿ ಭಾಗವಹಿಸುತ್ತರೆ. ಚೆಂಡು ಗದ್ದೆಯ ಬದಿಗೆ ಮುಟ್ಟಿಸಿ ಚೆಂಡು ಹಾರಿಸಿದವರಿಗೆ ಎತ್ತಿಕೊಂಡು ಬಂದು ಕೊಟ್ಟರೆ ಗೆಲುವು ಅವರಿಗಾಗುತ್ತದೆ. ಹೀಗೆ ದಿನಕ್ಕೆ ಮೂರು ಬಾರಿ ಚೆಂಡಾಟ ನಡೆಯುವುದು.ನಂತರ ಚೆಂಡನ್ನು ಶ್ರೀ ದೇವಳಯಕ್ಕೆ ತಂದು ಶ್ರೀ ದೇವಿಗೆ ಪೂಜೆ ನಡೆದು ದೇವಸ್ಥಾನಕ್ಕೆ ಒಂದು ಸುತ್ತು ಮೆರವಣಿಗೆಯಲ್ಲಿ ತಂದಲ್ಲಿಗೆ ಚೆಂಡಿನ ಉತ್ಸವ ಮುಕ್ತಾಯವಾಗುವುದು. ಇದಕ್ಕೆ ಜೀಟಿಗೆ ಸಲಾಂ ಎಂದು ಕರೆಯುತ್ತಾರೆ.ಈಗೇ ಪೊಳಲಿಯಲ್ಲಿ ಐದು ದಿನಗಳ ಚೆಂಡಿನ ಉತ್ಸವ ನಡೆಂಯುತ್ತದೆ.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...