Monday, February 2, 2026

ಪೊಳಲಿ ದೇವಾಲಯದಲ್ಲಿ ಕಲಶಾಭಿಷೇಕ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಾಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವರುಗಳಿಗೆ ಶ್ರೀ ರಾಜರಾಜೇಶ್ವರೀ .ಶ್ರೀ ಸುಬ್ರಹ್ಮಣ್ಯ, ಶ್ರೀ ವಿನಾಯಕ, ಶ್ರೀ ಭದ್ರಕಾಳಿ ದೇವರುಗಳ ಜೀವಕಲಶಾಭಿಷೇಕ ನಡೆಯಿತು. ಹಾಗೂ ಶ್ರೀ ಕ್ಷೇತ್ರಪಾಲನ ಬಿಂಬಪ್ರತಿಷ್ಠೆ, ಶ್ರೀ ಮಗೃಂತಾಯ ದೈವದ ಪ್ರತಿಷ್ಠೆ , ಅಭಿಷೇಕವು ಪೊಳಲಿ ಕೃಷ್ಣ ತಂತ್ರಿ ಗಳ ನೇತೃತ್ವದಲ್ಲಿ ನಡೆಯಿತು.

ಕಾಲ ಪ್ರಸನ್ನಪೂಜೆ, ಶ್ರೀ ಕ್ಷೇತ್ರಪಾಲ ಬಿಂಬಪ್ರತಿಷ್ಠೆ, ಶ್ರೀ ಮಗೃಂತಾಯ ದೈವದ ಪ್ರತಿಷ್ಠೆ ಹಾಗೂ ಮದ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.
ಸಾಯಾಂಕಾಲ ಭದ್ರಕಾಳಿ ಮಂಡಲ ಪೂಜೆ, ವನದುರ್ಗಾಹವನ, ಶ್ರೀ ಕೊಡಮಣಿತ್ತಾಯ ದೈವಕ್ಕೆ 25 ಕಲಶಾಧಿವಾಸ, ಅಧಿವಾಸಹವನ, ಪ್ರಸನ್ನಪೂಜೆ ವೈಧಿಕ ವಿಧಿವಿಧನಗಳೋಂದಿಗೆ ಕ್ಷೇತ್ರದ ತಂತ್ರಿ ಸುಬ್ರಹ್ಮಣ್ಯ ,ವೇಂಕಟೇಶ್ ತಂತ್ರಿಗಳ ನೇತೃತ್ವದಲ್ಲಿ ದೇವಾಲಯದ ಪವಿತ್ರಪಾಣಿ ಮಾಧವ ಭಟ್, ರಾಮಭಟ್, ಕೆ. ನಾರಾಯಣ ಭಟ್, ಪರಮೇಶ್ವರ ಭಟ್, ಮಾಧವ ಮಯ್ಯ, ವಿಷ್ಣೂಮೂರ್ತಿ ನಟ್ಟೋಜ ಪುರೋಹಿತ ವರ್ಗದವರು ನೆರವೇರಸಿದರು. ಈ ಸಂಧರ್ಭದಲ್ಲಿ ಕಟೀಲು ದೇವಳದ ಅನಂತ ಪದ್ಮನಾಭ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಕಮಲಾದೇವಿ ಪ್ರಸಾದ, ವೆಂಕಟರಮಣ ಆಸ್ರಣ್ಣ, ಹಿಂದೂ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಮಾಜಿ ಸಚಿವರುಗಳಾದ ಬಿ.ನಾಗರಾಜ ಶೆಟ್ಟಿ, ಬಿ.ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ, ಧಾರ್ಮಿಕ ಪರಿಷತ್ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ , ಉಧ್ಯಮಿ ಪುಣೆ ರೋಹಿತ್ ಶೆಟ್ಟಿ ಹಾಗೂ ಹಲಾವಾರು ಗಣ್ಯರು ಉಪಸ್ಥಿತರಿದ್ದರು.

ದೇವಳದ ಅನುವಂಶಿಕ ಆಡಳಿತ ಮೊಕತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಅನುವಂಶಿಕ ಮೊಕ್ತೇಸರರಾದ ಯು. ತಾರಾನಾಥ ಆಳ್ವ, ಚೇರಾ ಸೂರ್ಯ ನಾರಾಯಣ ರಾವ್ ದೇವಳದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಹಾಗೂ ಸಾವಿರ ಸೀಮೇಯ ಭಕ್ತಾಧಿಗಳು ಉಪಸ್ಥಿತರಿದ್ದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...