Wednesday, January 28, 2026

ಮಗುವಿನ ಚಿಕಿತ್ಸೆ ವೆಚ್ಚಕ್ಕಾಗಿ ವಿಭಿನ್ನ ವೇಷ ಧರಿಸಿ ಪೊಳಲಿಯಲ್ಲಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ವತಿಯಿಂದ ಧನ ಸಂಗ್ರಹ

ಬಂಟ್ವಾಳ : ತುಳುನಾಡ ಪೊರ್ಲು ಸೇವಾ ಟ್ರಸ್ಟ್ (ರಿ.) ನ ವತಿಯಿಂದ ಮೂಡಬಿದ್ರೆ ತಾಲೂಕಿನ ಪಡು ಮಾರ್ನಾಡು ನಡಿಲ್ಲ ನಡುಮನೆಯ ಬಾಲಕೃಷ್ಣ ಮತ್ತು ಕುಸುಮಾವತಿ ದಂಪತಿಗಳ 13 ವರ್ಷದ ಪುತ್ರಿ ವೈಷ್ಣವಿಯ ಚಿಕಿತ್ಸೆ ಗಾಗಿ ಪೊಳಲಿಯಲ್ಲಿ ಕಾರ್ಯಕರ್ತರು ವಿಭಿನ್ನ ವೇಷದ ಮೂಲಕ ಧನಸಂಗ್ರಾಹದ ಕಾರ್ಯದಲ್ಲಿ ತೊಡಗಿದ್ದಾರೆ.

ವೈಷ್ಣವಿ ಅವರು ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ದೇಹದ ತೀವ್ರ ವಾಗಿ ಜಖಂಗೊಂಡಿದೆ.

ಪ್ರಸ್ತುತ ಉಡುಪಿ ಯ ಆದರ್ಶ ಆಸ್ಪತ್ರೆಯ ಲ್ಲಿ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದು ಇವಳ ಚಿಕಿತ್ಸೆ ಗೆ ಸುಮಾರು 3 ಲಕ್ಷಕ್ಕೂ ಅಧಿಕ ವೆಚ್ಚದ ಅಗತ್ಯವಿದೆ.

ಬಡಕುಟುಂಬದ ಈ ಮಗುವಿನ ಚಿಕಿತ್ಸೆ ಗಾಗಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವಿಭಿನ್ನ ವೇಷ ಧರಿಸಿ ಪೊಳಲಿ ಶ್ರೀರಾಜರಾಜೇಶ್ವರಿ ದೇವಾಲಯದ ಬ್ರಹ್ನಕಲಶೋತ್ಸವದ ಸಂದರ್ಭ ಹಣ ಸಂಗ್ರಹದ ಕಾರ್ಯದಲ್ಲಿ ತೊಡಗಿದೆ.

ಪೊಳಲಿಯಲ್ಲಿ 12 ಜನರ ತಂಡ ಇಂದು ಮುಂಜಾನೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಹಣಸಂಗ್ರಹದ ಕಾರ್ಯದಲ್ಲಿ ತೊಡಗಿದ್ದರು, ಇದಲ್ಲದೆ ಇತ್ತೀಚಿಗೆ ನಡೆದ ಕಕ್ಯೆಪದವು ಬ್ರಹ್ಮ ಬೈದರ್ಕಲ ಗರಡಿಯಲ್ಲಿ ಕೂಡ ಹಣ ಸಂಗ್ರಾಹ ಮಾಡಲಾಗಿತ್ತು ಟ್ರಸ್ಟ್ ನ ಅಧ್ಯಕ್ಷ ನವೀನ್ ಪಿ.ಮಿಜಾರ್ ತಿಳಿಸಿದರು.

ಕಳೆದ 54 ತಿಂಗಳ ಹಿಂದೆ ರಚನೆಗೊಂಡ ಈ ಟ್ರಸ್ಟ್ 400 ಸೇವಾ ಯೋಜನೆಯೊಂದಿಗೆ ಸುಮಾರು 37 ಲಕ್ಷ ನೆರವನ್ನು ಸಮಾಜದ ಬೇರೆ ಬೇರೆ ಸ್ತರದ ಆಶಕ್ತರಿಗೆ ನೀಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಮಗುವಿನ ಚಿಕಿತ್ಸೆ ಗೆ ನೆರವು ನೀಡುವ ಮನಸ್ಸು ಇರುವ ವ್ಯಕ್ತಿಗಳು ದೂರವಾಣಿ ಸಂಖ್ಯೆ: 9880956086

ಹಾಗೂ ಸಿಂಡಿಕೇಟ್ ಬ್ಯಾಂಕ್ ಖಾತೆ ನಂ.02702200018893 ಇದಕ್ಕೂ ನೇರವಾಗಿ ಹಾಕಬಹುದು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...