Wednesday, February 12, 2025

ಪೊಳಲಿ: ಬ್ರಹ್ಮಕಲಶೋತ್ಸವದ ಚಪ್ಪರ ಮಹೂರ್ತ

ಪೊಳಲಿ: ಇತಿಹಾಶ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಮಾ. 4 ರಿಂದ ಮಾ. 13ರ ವರೆಗೆ ನಡೆಯಲಿದ್ದು, ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪೂರ್ವ ಭಾವಿಯಾಗಿ ಬೆಳಗ್ಗೆ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬ್ರಹ್ಮ ಶ್ರೀ ವೇದಮೂರ್ತಿಪೊಳಲಿ ಸುಬ್ರಹಣ್ಯ ತಂತ್ರಿಗಳ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಚಪ್ಪರ ಮಹೂರ್ತ ನಡೆಯಿತು.

ಪ್ರಧಾನ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್ , ಕೆ.ರಾಮ್ ಭಟ್, ಆದರ್ಶ ಭಟ್ ಹಾಗೂ ವಿಷ್ಣುಮೂರ್ತಿ ನಟ್ಟೋಜ, ಮಾಧವ ಮಯ್ಯ ಮತ್ತು ದೇವಳದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಅನುವಂಶಿಕ ಮೊಕ್ತೇಸರ ಉಳಿಪಾಡಿಗುತ್ತು ತಾರಾನಾಥ ಆಳ್ವ , ಅನುವಂಶಿಕ ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಪದ್ಮನಾಭ ಭಟ್, ಅನಂತಪದ್ಮನಾಭ ಭಟ್, ಕಾರ್ಯನಿವಹಣಾಧಿಕಾರಿ ಪ್ರವೀಣ್ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಬಿ.ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ, ಜಿ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ತಾ. ಪಂ ಸದಸ್ಯ ಯಶವಂತ ಪೊಳಲಿ, ಶೆಡ್ಡೆ ಮಂಜುನಾಥ ಭಂಡಾರಿ, ಆಶಾಜ್ಯೋತಿ ರೈ, ಕೃಷ್ಣಕುಮಾರ್ ಪೂಂಜ ಅಮ್ಮುಂಜೆಗುತ್ತು, ಶಿವಪ್ರಸಾದ್ ಅಮ್ಮುಂಜೆಗುತ್ತು, ಜೀವರಾಜ್ ಶೆಟ್ಟಿ ಅಮ್ಮುಂಜೆಗುತ್ತು,ದೇವ್ ದಾಸ್ ಹೆಗ್ಡೆ ಅಮ್ಮುಂಜೆಗುತ್ತು,ಗಣೇಶ್‌ಶೆಟ್ಟಿ ಪರಾರಿ, ವೆಂಕಟೇಶ್ ನಾವಡ, ಸೇಸಪ್ಪ ಕೋಟ್ಯಾನ್ ಪಚಿನಡ್ಕ, ರಾಮ್ ದಾಸ್ ಕೋಟ್ಯಾನ್,ಸುಬ್ರಾಯ ಕಾರಂತ,ಚಂದ್ರಶೇಖರಭಂಡಾರಿ,ಚಂದ್ರಹಾಶ ಶೆಟ್ಟಿ ಮತ್ತುಭಕ್ತಾಧಿಗಳು ಉಪಸ್ಥಿತರಿದ್ದರು. ಪೂಜಾವಿಧಿ ವಿಧಾನಗಳು ನೆರವೇರಿದ ಬಳಿಕ ತಂತ್ರಿಗಳು ಸುಬ್ರಹಣ್ಯ ಕೆಲಸ ಕಾರ್ಯಗಳು ಯಾವುದೇ ವಿಘ್ಣವಿಲ್ಲದೆ ನಿರಾತಂಕವಾಗಿ ನಡೆಯಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ಧನಂಜಯ ಗಂದಾಡಿ, ರಾಮಚಂದ್ರಭಟ್, ಶಿವಪ್ರಸಾದ್ ಅವರಿಗೆ ನೀಡಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...