Monday, July 14, 2025

ಪೊಳಲಿ ‌ಬ್ರಹ್ಮಕಲಶೋತ್ಸವ ಬ್ಯಾನರಿಗೂ ನೀತಿ ಸಂಹಿತೆ ಬಿಸಿ: ಭಕ್ತರ ಆಕ್ರೋಶ

ಬಂಟ್ವಾಳ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಬಿಸಿರೋಡಿನ ಲ್ಲಿ ಹಾಕಲಾಗಿದ್ದ ಬ್ಯಾನರ್ ಗಳನ್ನು ಪುರಸಭಾ ಅಧಿಕಾರಿ ಗಳು ಇಂದು ಮುಂಜಾನೆ ತೆರವುಗೊಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಯ ನೆಪವೊಡ್ಡಿ ಪೊಳಲಿ ದೇವಾಲಯದ ಬ್ರಹ್ಮಕಲಶೋತ್ಸವ ದ ಅಂಗವಾಗಿ ಹಾಕಲಾಗಿದ್ದ ಬ್ಯಾನರ್ ಗಳ ತೆರವು ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ.
ಬ್ರಹ್ಮಕಲಶೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು ತೆರವುಗೊಳಿಸುವ ವೇಳೆ ಭಕ್ತರು ಹಾಗೂ ಪುರಸಭಾ ಅಧಿಕಾರಿಗಳ ನಡುವೆ ಕೆಲಹೊತ್ತು ಮಾತಿನ ಚಕಮಕಿ ನಡೆಯಿತು.

ಯಾವುದೇ ರಾಜಕೀಯ ಪ್ರಚಾರದ ಉದ್ದೇಶದಿಂದ ನಾವು ಬ್ಯಾನರ್ ಅಳವಡಿಸಿಲ್ಲ, ಇಲ್ಲಿನ ಇತಿಹಾಸ ಪ್ರಸಿದ್ಧ ಹಾಗೂ ಭಕ್ತರ ಭಕ್ತಿಯ ನೆಲೆಯಾದ ಪೊಳಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಇಲ್ಲಿ ಬ್ಯಾನರ್ ಗಳನ್ನು ಹಾಕಲಾಗಿದೆ ಇದನ್ನು ತೆರವುಮಾಡಬಾರದು ಎಂದು ಭಕ್ತರು ಪುರಸಭಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ, ಆ ಸಂದರ್ಭದಲ್ಲಿ ಕೆಲಹೊತ್ತು ಪುರಸಭಾ ಸಿಬ್ಬಂದಿ ಗಳು ಹಾಗೂ ಭಕ್ತರ ಮಧ್ಯೆ ಕೆಲಹೊತ್ತು ಮಾತಿನ ಚಕಮಕಿ ನಡೆದಾಗ ಬಂಟ್ವಾಳ ನಗರ ಠಾಣಾ ಎಸ್. ಐ‌.ಚಂದ್ರಶೇಖರ್ ಸ್ಥಳಕ್ಕೆ ಬೇಟಿ ಕಾನೂನು ಸ್ಯುವ್ಯಸ್ಥೆಗೆ ತೊಂದರೆ ಆಗದಂತೆ ಎಚ್ಚರ ವಹಿಸಿದ್ದರು.
ಪೊಳಲಿ ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ಬಿಸಿರೋಡಿನ ಲ್ಲಿ ಹಾಕಲಾಗಿದ್ದ ಬ್ಯಾನರ್ ಗಳು ಬಿಸಿರೋಡ್ ಪರಿಸರದಲ್ಲಿ ಹಬ್ಬ ದ ವಾತಾವರಣ ಉಂಟಾಗಿತ್ತು. ಆದರೆ ಚುನವಣಾ ನೀತಿ ಸಂಹಿತೆ ಯ ಬಿಸಿ ಬಿಸಿರೋಡಿನಲ್ಲಿದ್ದ ಸಂಭ್ರಮ ದ ವಾತಾವರಣ ಕಳೆಗುಂದಿದೆ.
ಜಿಲ್ಲಾಧಿಕಾರಿ ಗಳಿಗೆ ಭಕ್ತರು ಪೋನ್ ಮೂಲಕ ಸಂಪರ್ಕ ಮಾಡಲಾಗಿ ತಾತ್ಕಾಲಿಕ ವಾಗಿ ತೆರವು ಕಾರ್ಯಕ್ಕೆ ಬ್ರೇಕ್ ಬಿದ್ದಿದೆ.
ಕೈಕಂಬ ಪರಿಸರದ ಕೆಲವು ಬ್ಯಾನರ್ ಗಳಿಗೆ ತಾತ್ಕಾಲಿಕವಾಗಿ ಉಳಿದಿದೆ.
ಪ್ರಮುಖರಾದ ಮಚ್ಚೇಂದ್ರ ಸಾಲಿಯಾನ್, ಪ್ರಣಾಮ್ ಬಿಸಿರೋಡ್, ನಾಗೇಶ್, ಪ್ರತೀಶ್, ಮಹೇಶ್ ಶೆಟ್ಟಿ ಹಾಗೂ ಪುರಸಭಾ ಸಿಬ್ಬಂದಿ ಗಳಾದ ಇಕ್ಬಾಲ್ ಮತ್ತಿತರ ಹಾಜರಿದ್ದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...