Thursday, February 5, 2026

ಸಂಪನ್ನಗೊಂಡಿತು ಐತಿಹಾಸಿಕ ಪೊಳಲಿ ಬ್ರಹ್ಮಕಲಶೋತ್ಸವ

ಬಂಟ್ವಾಳ: ಲಕ್ಷ ಲಕ್ಷ ಭಕ್ತ ಜನಸಾಗರದ ಮಧ್ಯೆ ಐತಿಹಾಸಿಕ ತಾಯಿ ಪೊಳಲಿ ಶ್ರೀ ರಾಜರಾಜೇಶ್ವರಿಯ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿತು.
ಮುಂಜಾನೆಯಿಂದಲೇ ಜನಸಾಗರವೇ ಕ್ಷೇತ್ರ ಕ್ಕೆ ಹರಿದು ಬರುತ್ತಿತ್ತು. ಕಳೆದ ಹತ್ತುದಿನಗಳಿಂದ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ವ್ರದ್ದಿಯಾಗುತ್ತಲೇ ಇತ್ತು.
ಮಾ.4 ರಿಂದ ಮಾ13 ಬುಧವಾರ ಇಂದಿನ ದಿನದವರೆಗೂ ಲಕ್ಷಾಂತರ ಭಕ್ತರು ಅಗಮಿಸಿ ದೇವಿಯ ದರ್ಶನ ಪಡೆದು ಪ್ರಸದಾ ಸ್ವೀಕರಿಸಿದ್ದಾರೆ.

               

ಧಾರ್ಮಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಬಲು ಅಚ್ಚುಕಟ್ಟಾಗಿ ನೆರವೇರಿತ್ತು. ಜೊತೆಗೆ ಕ್ಷೇತ್ರ ಕ್ಕೆ ಆಗಮಿಸಿದ ಭಕ್ತರು ದೇವಾಲಯ ದ ಒಳಗೆ ಪ್ರವೇಶ ಮಾಡಿ ದೇವರ ದರ್ಶನ ಪಡೆದು ಬಳಿಕ ಲಘುಉಪಹಾರ ಅನ್ನಸಂತರ್ಪಣೆ , ನೀರಿನ ವ್ಯವಸ್ಥೆ, ಸ್ವಚ್ಚತಾ ಕೆಲಸ, ಪಾರ್ಕಿಂಗ್ ವ್ಯವಸ್ಥೆ , ಉಗ್ರಾಣ ದಲ್ಲಿನ ಅಚ್ಚುಕಟ್ಟಾದ ಜೊಡಣೆ, ಅತಿಥಿಗಳ ಸತ್ಕಾರ ಹೀಗೆ ಒಂದೇ ಎರಡೇ ಎಲ್ಲವೂ ಅದ್ಬುತ ವ್ಯವಸ್ಥೆ, ಯಾವುದು ಒಂದು ಚೂರು ಕೊರತೆಯಾಗದ ರೀತಿಯಲ್ಲಿ ದೇವಿಯ ಅನುಗ್ರಹ ದಂತೆ ಸಾಂಗವಾಗಿ ನೆರವೇರಿದೆ.
ದೇವಿಯ ಶಕ್ತಿಯ ಪ್ರಭಾವದಿಂದ ಇಡೀ ಜಿಲ್ಲೆಯೇ ಬೆರಗಾಗುವ ರೀತಿಯಲ್ಲಿ ಇಲ್ಲಿನ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿದೆ.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...