Thursday, February 13, 2025

ಪೊಳಲಿಯ ಸರ್ವಮಂಗಳ ಸ್ವರೂಪಿಣಿ ರಾಜರಾಜೇಶ್ವರಿ ಅಮ್ಮನಿಗೆ ನಡೆಯಿತು ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ಪೊಳಲಿಯ ಸರ್ವಮಂಗಳ ಸ್ವರೂಪಿಣಿ ರಾಜರಾಜೇಶ್ವರಿ ಅಮ್ಮನಿಗೆ ನಡೆಯಿತು ಬ್ರಹ್ಮಕಲಶೋತ್ಸವ. ಮುಂಜಾನೆ 4 ರಿಂದ ವಿವಿಧ ವೈದಿಕ ಕಾರ್ಯಕ್ರಮ ಗಳು ನಡೆದ ಬಳಿಕ ಬೆಳಿಗ್ಗೆ 7.40 ರಿಂದ ದೇವಸ್ಥಾನದಲ್ಲಿ ಐತಿಹಾಸಿಕ ಬ್ರಹ್ಮಕಲಶಾಭಿಷೇಕ ನಡೆಯಿತು.
ಮುಂಜಾನೆಯಿಂದಲೇ ಲಕ್ಷ ಲಕ್ಷ ಭಕ್ತರು ಈ ಪುಣ್ಯಕಾರ್ಯದಲ್ಲಿ ಪಾಲ್ಗೊಂಡರು.
ಕ್ಷೇತ್ರದ ಪ್ರಧಾನತಂತ್ರಿ ವೇ.ಮೂ. ಸುಬ್ರಹ್ಮಣ್ಯ ತಂತ್ರಿ ಇವರ ನೇತ್ರತ್ವದಲ್ಲಿ ಋತ್ವಿಜ್ಞರೊನ್ನೊಳಗೊಂಡ 60 ಮಂದಿಯ ವೈದಿಕರ ತಂಡ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಕೋಟ್ಯಾಂತರ ಭಕ್ತರ ಆರಾದ್ಯ ಶಕ್ತಿಯಾಗಿ ಕರಾವಳಿಯ ಪ್ರಮುಖ ಶಕ್ತಿಗಳ ದೇವಾಲಯ ಗಳಲ್ಲಿ ಪೊಳಲಿ ರಾಜರಾಜೇಶ್ವರಿ ಅಮ್ಮನವರ ದೇವಾಲಯವೂ ಒಂದಾಗಿದೆ.
ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಬ್ರಹ್ಮಕಲಶೋತ್ಸವ ಇಂದು ಸಂಪನ್ನಗೊಳ್ಳಲಿದೆ. ಇಡೀ ಜಿಲ್ಲೆಯಲ್ಲಿ ಹೊಸಸಂಚಲನ ಮೂಡಿಸಿ ಭಕ್ತರ ಭಕ್ತಿಗೆ ಶಕ್ತಿ ನೀಡಿದ ಪೊಳಲಿ ಅಮ್ಮನಿಗೆ ವೈಭವದ ಕಲಾಶಾಭಿಷೇಕ ನಡೆಯಿತು.
ಮಾ4 ರಿಂದ ಮಾ13 ರ ಇಂದಿನ ವರೆಗೂ ಅಚ್ಚುಕಟ್ಟಾದ ಎಲ್ಲಾ ವ್ಯವಸ್ಥೆ ಗಳು ಜಿಲ್ಲೆಯ ಜನರನ್ನು ಬೆರಗುಗೊಳಿಸಿದೆ.
ಪಲಿನಾಪುರದ ದೇವಿಯ ಪ್ರಬಲ ಶಕ್ತಿಯ ಜೊತೆಗೆ ಧಾರ್ಮಿಕ ದತ್ತಿ ಇಲಾಖೆ, ಆಡಳಿತ ಮಂಡಳಿ, ತಂತ್ರಿಗಳು ಹಾಗೂ ಊರ ಪರ ಊರ ಭಕ್ತರ ಒಂದೇ ಮನಸ್ಸಿನ ಸೇವೆ ಪೊಳಲಿ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...