Thursday, July 10, 2025

ಪೋಲೀಸ್ ಕ್ರೀಡಾ ಕೂಟದಲ್ಲಿ ಚಾಂಪಿಯನ್ ಆಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ವನಿತಾ

ಬಂಟ್ವಾಳ: ಜಿಲ್ಲಾ ಪೊಲೀಸ್ ಇಲಾಖೆ ಯ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಮಂಗಳೂರು ಪೊಲೀಸ್ ಕ್ರೀಡಾಂಗಣದಲ್ಲಿ ನಡೆಯಿತು.ವಿವಿಧ ಆಟೋಟಗಳು ನಡೆದು ಪುರುಷರ ವಿಭಾಗದ ಚಾಂಪಿಯನ್ ಆಗಿ ಜಿಲ್ಲಾ ಪೊಲೀಸ್ ನ ರಾಧಕೃಷ್ಣ ಗೌಡ, ಮಹಿಳಾ ವಿಭಾಗದಲ್ಲಿ ವನೀತಾ ಅವರು ಪ್ರಶಸ್ತಿ ಪಡೆದರು.
ತಂಡ ಪ್ರಶಸ್ತಿ ಡಿ.ಎ.ಆರ್/ಡಿ.ಪಿ.ಓ ತಂಡದ ಪಾಲಾಯಿತು.

ಸಮಾರೋಪ ಸಮಾರಂಭದಲ್ಲಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.
ಡಿ.ಎ.ಆರ್ ಘಟಕದ ಪೊಲೀಸ್ ನಿರೀಕ್ಷಕರಾದ ನಾರಾಯಣ ಪೂಜಾರಿ,ಜಿಲ್ಲೆಯ ಪೊಲೀಸ್ ಉಪಾಧಿಕ್ಷಕರುಗಳು, ನಿರೀಕ್ಷಕರುಗಳು, ಉಪ ನಿರೀಕ್ಷಕರುಗಳು ಉಪಸ್ಥಿತರಿದ್ದರು. ಸಮಾರೋಪ ಸಭೆಯ ನಂತರ ಮನರಂಜನೆಗಾಗಿ ಪೊಲೀಸ್ ಸಿಬ್ಬಂದಿಗಳಿಂದ ಕೊರೊನಾ ವಾರಿಯರ್ಸ್, ಕರ್ನಾಟಕ ವೈಭವ, ಶ್ವೇತಾ ಕುಮಾರ ಛದ್ಮವೇಶ ನಡೆಯಿತು..ಡಿ.ಎ.ಆರ್ ತಂಡವು ಪ್ರಸ್ತುತ ಪಡಿಸಿದ ಕೊರೊನಾ ವಾರಿಯರ್ಸ್ ನ ಕೊರೊನಾಕ್ಕೆ ಧರ್ಮವಿಲ್ಲ ಎಂಬ ಉತ್ತಮ ಸಂದೇಶ ನೀಡಿದ ಛದ್ಮವೇಷ ಸೇರಿದವರ ವಿಶೇಷ ಪ್ರಶಂಸೆ ಗೆ ಪಾತ್ರವಾಯಿತು.
ಛದ್ಮವೇಶ ಸ್ಪರ್ಧಾ ಕಾರ್ಯಕ್ರಮವನ್ನು ಖುದ್ದಾಗಿ ವೀಕ್ಷಿಸಿ ದ ಜಿಲ್ಲಾ ಪೋಲೀಸ್ ಅಧೀಕ್ಷಕರು ನಗದು ಬಹುಮಾನ ನೀಡಿ ಪ್ರೋತ್ಸಾಹ ನೀಡಿದ್ದಾರೆ.

ಬಂಟ್ವಾಳ ವೃತ್ತಕ್ಕೆ ಎರಡು ಪ್ರಥಮ ಬಹುಮಾನ
ಬಂಟ್ವಾಳ ವೃತ್ತದ ಪೋಲೀಸರು ವಾರ್ಷಿಕ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು ಗುಂಪು ಸ್ಪರ್ಧೆಯಲ್ಲಿ ಎರಡು ಪ್ರಥಮ ಬಹುಮಾನ ಗಳನ್ನು ತಮ್ಮದಾಗಿಸಿಕೊಂಡರು.
ಹಗ್ಗ ಜಗ್ಗಾಟ ಮತ್ತು ಕಬ್ಬಡ್ಡಿ ಆಟದಲ್ಲಿ ಪ್ರಥಮ ಸ್ಥಾನವನ್ನು ಬಹುಮಾನ ಪಡೆದುಕೊಂಡರು.
ಹಾಗೂ 400*100 ಮೀಟರ್ ರಿಲೆ ಓಟದಲ್ಲಿ ತೃತೀಯ ಬಹುಮಾನ ಪಡೆದುಕೊಂಡರು.

ವೈಯಕ್ತಿಕ ಕ್ರೀಡೆಯಲ್ಲಿ ಚಾಂಪಿಯನ್ ಆಗಿ ಮೂಡಿ ಬಂದ ವನಿತಾ

ಬಂಟ್ವಾಳ ನಗರ ಪೋಲೀಸ್ ಠಾಣೆಯ ಮಹಿಳಾ ಪೋಲೀಸ್ ಸಿಬ್ಬಂದಿ ವನಿತಾ ಅವರು ವೈಯಕ್ತಿಕ ಆಟೋಟ ಸ್ಪರ್ಧೆಯಲ್ಲಿ ಚಾಂಪಿಯನ್ ಅಗಿ ಮಿಂಚಿದ್ದಾರೆ.
100, 200 , 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಲಾಂಗ್ ಜಂಪ್ ನಲ್ಲಿ ದ್ವಿತೀಯ, ರೈಪಲ್ ಶೂಟಿಂಗ್ ನಲ್ಲಿ ಥರ್ಡ್ ಪ್ರೈಸ್ ಪಡೆದುಕೊಂಡಿದ್ದಾರೆ.
ಇವರು ಈ ಹಿಂದೆ ನಡೆದ ರಾಜ್ಯ ಮಟ್ಟದ ಪೋಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ನಗರ ಪೋಲಿಸ್ ಠಾಣೆಯ ಸಿಬ್ಬಂದಿ ಮುತ್ತಪ್ಪ ಅವರು 100, 400, 800 ಮೀಟರ್ ಓಟದಲ್ಲಿ ದ್ವೀತಿಯ ಹಾಗೂ 400* 100 ರಿಲೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಸಶಸ್ತ್ರ ಮೀಸಲು ವಿಶೇಷ ಪಡೆ ಮಂಗಳೂರು , ಸುಳ್ಯ ವೃತ್ತ, ಪುತ್ತೂರು ವೃತ್ತ, ಬಂಟ್ವಾಳ, ಬೆಳ್ತಂಗಡಿ ವೃತ್ತದ ಪೋಲೀಸರು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...