Sunday, July 13, 2025

ಕಲ್ಲಡ್ಕ ಬೀದಿ ಬದಿ ವ್ಯಾಪಾರಿಗಳನ್ನು ಓಡಿಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್

ಬಂಟ್ವಾಳ: ರಾಜ್ಯದಲ್ಲಿ ಸಂತೆಯ ರೂಪದಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿಲ್ಲ ಎಂದು ಹೇಳಿದ್ದರು ಕೂಡಾ ದ.ಕ.ಜಿಲ್ಲೆಯ ಲ್ಲಿ ನಿರಾತಂಕ ವಾಗಿ ಬೀದಿ ಬದಿ ವ್ಯಾಪಾರ ಗಳು ನಡೆಯುತ್ತಾ ಇದೆ. ಈ ರೀತಿಯ ವ್ಯಾಪಾರ ದಿಂದಾಗಿ ಸೊಂಕು ಹರಡುವ ಲಕ್ಷಣಗಳು ಹೆಚ್ಚು ಇರುತ್ತದೆ ಎಂದು ಹೇಳಿದರು ಜನ ಕೇಳುವ ಸ್ಥಿತಿಯಲ್ಲಿ ಇಲ್ಲ, ಬೀದಿಬದಿ ವ್ಯಾಪಾರ ಗಳು ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ, ಪೋಲೀಸ್ ಅಧಿಕಾರಿಗಳು ಇವರನ್ನು ಓಡಿಸುತ್ತಲೇ ಇದ್ದಾರೆ.
ಗುರುವಾರ ಕೈಕಂಬದಲ್ಲಿ ಬೀದಿಯಲ್ಲಿ ತರಕಾರಿ ಅಂಗಡಿಗಳ ಜೊತೆಯಲ್ಲಿ ದಿನಸಿ ಸಾಮಾಗ್ರಿಗಳು, ಒಣ ಮೀನು ಗಳು ಹೀಗೆ ಎಲ್ಲವನ್ನೂ ಮಾರಟ ಮಾಡಲು ಆರಂಭಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೋಲೀಸರು ತೆರವುಗೊಳಿಸಿದ್ದರು. ಆದರೆ ಮತ್ತೆ ಅದೇ ರೀತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬಿಸಿರೋಡಿನ ಕೈಕಂಬ ದಲ್ಲಿ ವ್ಯಾಪಾರ ಮಾಡುವ ದೃಶ್ಯಗಳು ಇಲ್ಲಿ ಕಾಣಸಿಗುತ್ತವೆ.

ಕಲ್ಲಡ್ಕ ಬೀದಿ ಬದಿ ವ್ಯಾಪಾರಿಗಳನ್ನು ಓಡಿಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತ್ರತ್ವದ ಪೋಲೀಸ್ ತಂಡ

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಲ್ಲಡ್ಕ ಪೇಟೆಯಲ್ಲಿ ಬೀದಿಬದಿಯಲ್ಲಿ ಮಾರಾಟ ಜೋರಾಗಿ ನಡೆಯುತ್ತಿತ್ತು.ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಯ ನಿರ್ಲಕ್ಷ್ಯದಿಂದ ಸೊಂಕು ಹರಡುವ ಲಕ್ಷಣಗಳು ಹೆಚ್ಚು ಇರುವುದರಿಂದ ಪೋಲೀಸರು ಅವರನ್ನು ತೆರವುಗೊಳಿಸಿದರು.
ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಲ್ಲಿಯೂ ಹೆಚ್ಚಿನ ಮುಂಜಾಗ್ರತೆ ಅಗತ್ಯ.
ಹಾಗಾಗಿ ಹೆಚ್ಚಿನ ಜಾಗೃತಿ ಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ಬೀದಿ ಬದಿಯ ಜೊತೆ ಜನಸೇರುವ ಯಾವುದೇ ವ್ಯಾಪಾರ ಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಧಿಕಾರಿಗಳ ಮಾತಿಗೆ ಬೆಲೆ ಕೊಡದೆ ತಿರುಗಾಟ ನಡೆಸಿದರೆ , ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವಹಿವಾಟು ನಡೆಸಿದರೆ ದ.ಕ.ಜಿಲ್ಲೆಯೂ ಸೀಲ್ ಡೌನ್ ಅಗುವುದರಲ್ಲಿ ಸಂಶಯವಿಲ್ಲ. ಏನೇ ಇರಲಿ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರಕಾರದ ಅದೇಶವನ್ನು ನೀವು ನಾವು ಪಾಲಿಸಲೇಬೇಕಾಗಿದೆ.
ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪು ಸೇರುವ ಬೀದಿಬದಿ ವ್ಯಾಪಾರಿಗಳಿಗೆ ಅವಕಾಶವನ್ನು ಬಂಟ್ವಾಳ ತಾಲೂಕಿನ ಅಧಿಕಾರಿಗಳು ನೀಡಲೇ ಬಾರದು ಎಂಬುದು ಸಾರ್ವಜನಿಕ ಒತ್ತಾಯವಾಗಿದೆ.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...