Sunday, February 9, 2025

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ಬಂಟ್ವಾಳ: 2019ನೇ ಸಾಲಿನ ಬಂಟ್ವಾಳ ತಾಲೂಕು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆಯನ್ನು ಚಂದ್ರಹಾಸ ಕರ್ಕೇರಾ, ಅಧ್ಯಕ್ಷರು ತಾಲೂಕು ಪಂಚಾಯತ್ ಬಂಟ್ವಾಳ ಇವರು ಪೋಲಿಯೋ ಹನಿಯನ್ನು ಮಕ್ಕಳಿಗೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಅಬ್ಬಾಸ್ ಆಲಿ, ಡಾ| ವಸಂತ ಬಾಳಿಗಾ ಲಯನ್ಸ್ ಕ್ಲಬ್, ಡಾ| ಸದಾಶಿವ್ ಶ್ಯಾನುಭೋಗ್ ಆಡಳಿತ ವೈದ್ಯಾಧಿಕಾರಿ ತಾಲೂಕು ಆಸ್ಪತ್ರೆ ಬಂಟ್ವಾಳ, ಡಾ| ಸುರೇಂದ್ರನಾಥ್ ನಾಯ್ಕ್ ತಜ್ಞ ವೈದ್ಯರು ತಾಲೂಕು ಆಸ್ಪತ್ರೆ ಬಂಟ್ವಾಳ ಇವರು ಉಪಸ್ಥಿತರಿದ್ದರು. ಡಾ| ದೀಪಾಪ್ರಭು ಸ್ವಾಗತಿಸಿ ಕಾರ್‍ಯಕ್ರಮ ನಿರೂಪಿಸಿದರು.

 

ರೋಟರಿ  ಕ್ಲಬ್ ಬಂಟ್ವಾಳ ಟೌನ್  ವತಿಯಿಂದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ

ಬಂಟ್ವಾಳ : ಅಂತರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೊ ನಿರ್ಮೂಲನೆಗೆ ರೋಟರಿ ಶ್ರಮಿಸುತ್ತಿದೆ ಎಂದು ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ ಹೇಳಿದರು.
          ಅವರು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ  ಬಿ ಸಿ ರೋಡಿನ ಖಾಸಗಿ ಬಸ್ ನಿಲ್ದಾಣದಲ್ಲಿ   ನಡೆದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ 5 ತಿಂಗಳ ಮಗು ತಶ್ವಿಕಾ ಳಿಗೆ ಪೋಲಿಯೊ  ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂಗ ವಿಕಲತೆ- ಜೀವ ಹಾನಿ ಮಾಡುವ ಮಾರಕ ಪೋಲಿಯೊ ನಿಯಂತ್ರಣ ಮಾಡುವಲ್ಲಿ ಕಳೆದ 2 ದಶಕಗಳ ರೋಟರಿ ಶ್ರಮದ ಫಲವಾಗಿ ವಿಶ್ವದಾದ್ಯಂತ ಪಾಕಿಸ್ತಾನ-ಅಫ್ಘಾನಿಸ್ಥಾನ ಹೊರತುಪಡಿಸಿ ಶೂನ್ಯ ಕ್ಕೆ ತರಲಾಗಿದೆ  ಹಾಗೂ ಪೋಷಕರು  ಮಕ್ಕಳಿಗೆ ಲಸಿಕೆ ನೀಡುವಲ್ಲಿ ಅಲಕ್ಷ್ಯ ಮಾಡದೆ ಯೋಜನೆ ಸದುಪಯೋಗ ಮಾಡಬೇಕಿದೆ ಎಂದರು  .ಕಾರ್ಯಕ್ರಮದಲ್ಲಿರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಕಾರ್ಯದರ್ಶಿ ಜಯರಾಜ್ ಬಂಗೇರ, ಪದಾಧಿಕಾರಿಗಳಾದ ದಯಾನಂದ ಶೆಟ್ಟಿ, ಮಹಮ್ಮದ್ ಹನೀಫ್,ಮಹಮ್ಮದ್ ಮುನೀರ್, ಪ್ರಕಾಶ್ ಆಳ್ವಾ, ಕಿಶೋರ್ ಕುಮಾರ್, ಸವಿತಾ ನಿರ್ಮಲ್, ಮನಿಷಾ ಜಯರಾಜ್ ಉಪಸ್ತಿತರಿದ್ದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...