Saturday, February 8, 2025

ಪೂಜಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಾರಾ?

ಮಂಗಳೂರು: ಲೋಕಸಭಾ ಚುನಾವಣೆ ದಿನ ನಿಗದಿಯಾದ ಕೂಡಲೇ ಮಾಜಿ ಕೇಂದ್ರ ಸಚಿವ ಹಿರಿಯ ಕಾಂಗ್ರೇಸ್ ಧುರೀಣ ಬಿ.ಜನಾರ್ಧನ ಪೂಜಾರಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾನು ಒರ್ವ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.‌
ಹಲವು ಸಮಯದ ಬಳಿಕ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ಈ‌ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್. ರಾಜೇಂದ್ರ ಕುಮಾರ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ತೇಲಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೇಂದ್ರ ಕುಮಾರ್ ದೊಡ್ಡ ಭ್ರಷ್ಟಾಚಾರಿ. ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಧ್ಯಮಗಳಲ್ಲಿ ಬಂದಿದೆ. ಬಡವರ ಹಣವನ್ನು ರಾಜೇಂದ್ರ ಕುಮಾರ್ ನುಂಗಿದ್ದಾರೆ ಎಂದು ಕಿಡಿಕಾರಿದರು.
ಒಂದು ವೇಳೆ ಕಾಂಗ್ರೆಸ್ ಪಕ್ಷ ರಾಜೇಂದ್ರ ಕುಮಾರ್ ರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ತಾವು ಅವರ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾನೂ ಟಿಕೆಟ್ ಆಕಾಂಕ್ಷಿ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ಟಿಕೆಟ್ ಸಿಕ್ಕಿದರೆ ಸ್ಪರ್ಧೆ ಖಂಡಿತ ಎಂದು ತಿಳಿಸಿದರು.
ಎರಡು ದಿನದಲ್ಲಿ ಸೋನಿಯಾ, ರಾಹುಲ್ ಗಾಂಧಿಯನ್ನು ಭೇಟಿಯಾಗುತ್ತೇನೆ. ಪಕ್ಷದ ಹಿರಿಯ ಪ್ರಭಾವಿ ಮುಖಂಡರನ್ನು ಭೇಟಿಯಾಗಿ ಟಿಕೆಟ್ ಕೇಳುತ್ತೇನೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ಹೊರತುಪಡಿಸಿ ಬೇರೆ ಯಾರಿಗೆ ಟಿಕೆಟ್ ನೀಡಿದರೂ ನನ್ನ ಬೆಂಬಲವಿದೆ ಎಂದು ಪೂಜಾರಿ ಸ್ಪಷ್ಟಪಡಿಸಿದರು.
ಭ್ರಷ್ಟಾಚಾರ ನಿರ್ಮೂಲನೆ ಮೋದಿಯಿಂದ ಮಾತ್ರ ಸಾಧ್ಯ ಎಂದು ಹೇಳಿದ ಪೂಜಾರಿ, ಮೋದಿ ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು. ಮೋದಿ ಭ್ರಷ್ಟಚಾರದ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಮುಂದೆಯೂ ಗೆಲ್ಲುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...