Monday, July 14, 2025

ತುಂಬೆ : ತೆರೆದ ಬಾವಿಗೆ ಗುದ್ದಲಿ ಪೂಜೆ

ಬಂಟ್ವಾಳ: ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯರಾದ ಗಣೇಶ್ ಸುವರ್ಣ ತುಂಬೆ ಇವರ ಅನುದಾನದಲ್ಲಿ (ಒಂದು ಲಕ್ಷ ಹತ್ತು ಸಾವಿರ) ಮುಳಿಪಡ್ಪು, ತುಂಬೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೂತನವಾದ ತೆರೆದ ಬಾವಿಗೆ ಗುದ್ದಲಿ ಪೂಜೆ ನಡೆಯಿತು.

ಹಿರಿಯರಾದ ತಿಮ್ಮಪ್ಪ ಬೆಳ್ಚಾಡ, ಮುಳಿಪಡ್ಪು ಇವರು ತೆಂಗಿನ ಕಾಯಿ ಒಡೆಯುವುದರ ಕೆಲಸಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗಣೇಶ್ ಸುವರ್ಣ ತುಂಬೆ, ಗ್ರಾಮ ಪಂಚಾಯತ್ ಸದಸ್ಯರಾದ ಹೇಮಲತಾ ಜಿ ಪೂಜಾರಿ, ಅರುಣ್ ಕುಮಾರ್ ಗಾಣದಲಚ್ಚಿಲು, ಕಿಶೋರ್ ರಾಮಲ್ ಕಟ್ಟೆ, ಜಯಂತಿ ಶ್ರೀಧರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಅರುಣ್ ಕುಮಾರ್ ಬೊಳ್ಳಾರಿ, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷೆ ಜಲಜಾಕ್ಷಿ ಕೋಟ್ಯಾನ್, ಕಂಟ್ರಾಕ್ಟರ್ ಪ್ರಶಾಂತ್ ಕೊಟ್ಟಾರಿ, ಹಿರಿಯರಾದ ಐತ್ತಪ್ಪ ಕುಲಾಲ್ ಮುದಲ್ಮೆ, ಪ್ರದೀಪ್ ಕುಮಾರ್ ಮುದಲ್ಮೆ, ಲಕ್ಷ್ಮಣ ಪೂಜಾರಿ ಬೊಳ್ಳಾರಿ, ತಿಮ್ಮಪ್ಪ ಬೆಳ್ಚಾಡ ಮುಳಿಪಡ್ಪು, ದಿನೇಶ್ ಮಜಿ, ಪ್ರವೀಣ್ ಕೊಟ್ಟಿಂಜ, ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ ಯೋಗೀಶ್ ಕೋಟ್ಯಾನ್, ಹಿಂದೂ ಜಾಗರಣಾ ವೇದಿಕೆ ತುಂಬೆ ವಲಯ ಅಧ್ಯಕ್ಷ ವಿಜಯ್ ಕುಮಾರ್ ಕಜೆಕಂಡ, ಬಿಜೆಪಿ ತುಂಬೆಯ ಬೂತ್ ಅಧ್ಯಕ್ಷರುಗಳಾದ ಗೋಪಾಲ್ ಬೆದ್ರಾಡಿ, ಸದಾನಂದ ಕೋಡಿಯಡ್ಕ, ಶ್ರವಣ್ ಬೊಳ್ಳಾರಿ, ಸೋಮಶೇಖರ ಪರ್ಲಕ್ಕೆ, ಕಾರ್ಯದರ್ಶಿಗಳಾದ ಕೇಶವ ಬೊಳ್ಳಾರಿ, ಅನೀಶ್ ಪರ್ಲಕ್ಕೆ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಯುವರಾಜ್, ಯುವಮೋರ್ಚಾ ಸಂಚಾಲಕ ವಿಜಯ್ ಬೊಳ್ಳಾರಿ, ಮೋಹನ್ ದಾಸ್ ಪರ್ಲಕ್ಕೆ ಸೇರಿದಂತೆ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...