Wednesday, February 12, 2025

ಯಡಿಯೂರಪ್ಪ ಪ್ರಮಾಣವಚನ: ಪೊಳಲಿಯಲ್ಲಿ ವಿಶೇಷ ಪೂಜೆ

ಬಂಟ್ವಾಳ: ರಾಜ್ಯದ 4 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ದ.ಕ‌.ಜಿಲ್ಲೆಯ ಇತಿಹಾಸ ಪ್ರಸಿದ್ಧ ದೇವಾಲಯ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ನೇತ್ರತ್ವದಲ್ಲಿ ದೇವಿಗೆ ಸರ್ವ ಅಲಂಕಾರ ಪೂಜೆ ಸಲ್ಲಿಸಿ ಹಾಗೂ ವಿಶೇಷ ಪ್ರಾರ್ಥನೆ ಮಾಡಿದರು.

 

ಬೆಳಿಗ್ಗೆ ಸುಮಾರು 9.30 ರ ವೇಳೆ ಪೊಳಲಿ ದೇವಾಲಯದ ಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಭಕ್ತರ ಸಮ್ಮುಖದಲ್ಲಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಸರ್ವಾಲಂಕಾರ ಪೂಜೆ ಸಲ್ಲಿಸಲಾಯಿತು.

ಪೊಳಲಿಗೂ ಯಡಿಯೂರಪ್ಪ ಅವರಿಗೂ ವಿಶೇಷ ನಂಟು:
ದೇವಿ ದೇವಾಲಯದ ವಿಶೇಷ ಭಕ್ತರಾಗಿರುವ ಯಡಿಯೂರಪ್ಪ ಅವರು ಈ ಹಿಂದೆ ಎರಡು ಬಾರಿ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ವೇಳೆ ಪೊಳಲಿ ದೇವಾಲಯ ಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಒಂದು ಬಾರಿ ಡಿ.ಸಿ.ಎಮ್. ಅಗಿದ್ದಾಗಲೂ ಬಂದು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದುಕೊಂಡು ಹೋಗಿದ್ದರು.


ಅಲ್ಲದೆ ಇತ್ತೀಚಿಗೆ ನಡೆದ ಪೊಳಲಿ ಅಮ್ಮನವರ ಬ್ರಹ್ಮಕಲಶೋತ್ಸವ ದ ವೇಳೆಯೂ ದೇವಸ್ಥಾನಕ್ಕೆ ಅಗಮಿಸಿ ದೇವರ ದರ್ಶನ ಪಡೆದುಕೊಂಡು ಹೋಗಿದ್ದರು.

ಇಂದು ಸಂಜೆ 6.30 ರ ಗಂಟೆಯ ವೇಳೆ ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಯಡಿಯೂರಪ್ಪ ಅವರ ಅಯುಷ್ಯ, ಆರೋಗ್ಯ ಚೆನ್ನಾಗಿರಲಿ ಹಾಗೂ ಮುಖ್ಯಮಂತ್ರಿ ಯಾಗಿ ಉತ್ತಮ ಆಡಳಿತ ನಡೆಸಲಿ ಈ ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿ ಅವರ ಅವಧಿಯಲ್ಲಿ ಅಗಲಿ ಎಂದು ಪೂಜೆ ಸಲ್ಲಿಸಿ ಪ್ರಸಾದವನ್ನು ಶಾಸಕ ರಾಜೇಶ್ ನಾಯ್ಕ್ ಅವರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕೊಂಡು ಹೋಗಿದ್ದಾರೆ ಎಂದು ಶಾಸಕರ ಆಪ್ತ ವಲಯ ತಿಳಿಸಿದೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ರಾದ ಯಶವಂತ ಪೊಳಲಿ, ಗಣೇಶ್ ಹಾಗೂ ಪ್ರಮುಖರಾದ ವೆಂಕಟೇಶ್ ನಾವಡ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...