Friday, June 27, 2025

ಯಡಿಯೂರಪ್ಪ ಪ್ರಮಾಣವಚನ: ಪೊಳಲಿಯಲ್ಲಿ ವಿಶೇಷ ಪೂಜೆ

ಬಂಟ್ವಾಳ: ರಾಜ್ಯದ 4 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ದ.ಕ‌.ಜಿಲ್ಲೆಯ ಇತಿಹಾಸ ಪ್ರಸಿದ್ಧ ದೇವಾಲಯ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ನೇತ್ರತ್ವದಲ್ಲಿ ದೇವಿಗೆ ಸರ್ವ ಅಲಂಕಾರ ಪೂಜೆ ಸಲ್ಲಿಸಿ ಹಾಗೂ ವಿಶೇಷ ಪ್ರಾರ್ಥನೆ ಮಾಡಿದರು.

 

ಬೆಳಿಗ್ಗೆ ಸುಮಾರು 9.30 ರ ವೇಳೆ ಪೊಳಲಿ ದೇವಾಲಯದ ಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಭಕ್ತರ ಸಮ್ಮುಖದಲ್ಲಿ ಯಡಿಯೂರಪ್ಪ ಅವರ ಹೆಸರಿನಲ್ಲಿ ಸರ್ವಾಲಂಕಾರ ಪೂಜೆ ಸಲ್ಲಿಸಲಾಯಿತು.

ಪೊಳಲಿಗೂ ಯಡಿಯೂರಪ್ಪ ಅವರಿಗೂ ವಿಶೇಷ ನಂಟು:
ದೇವಿ ದೇವಾಲಯದ ವಿಶೇಷ ಭಕ್ತರಾಗಿರುವ ಯಡಿಯೂರಪ್ಪ ಅವರು ಈ ಹಿಂದೆ ಎರಡು ಬಾರಿ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ವೇಳೆ ಪೊಳಲಿ ದೇವಾಲಯ ಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಒಂದು ಬಾರಿ ಡಿ.ಸಿ.ಎಮ್. ಅಗಿದ್ದಾಗಲೂ ಬಂದು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದುಕೊಂಡು ಹೋಗಿದ್ದರು.


ಅಲ್ಲದೆ ಇತ್ತೀಚಿಗೆ ನಡೆದ ಪೊಳಲಿ ಅಮ್ಮನವರ ಬ್ರಹ್ಮಕಲಶೋತ್ಸವ ದ ವೇಳೆಯೂ ದೇವಸ್ಥಾನಕ್ಕೆ ಅಗಮಿಸಿ ದೇವರ ದರ್ಶನ ಪಡೆದುಕೊಂಡು ಹೋಗಿದ್ದರು.

ಇಂದು ಸಂಜೆ 6.30 ರ ಗಂಟೆಯ ವೇಳೆ ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಯಡಿಯೂರಪ್ಪ ಅವರ ಅಯುಷ್ಯ, ಆರೋಗ್ಯ ಚೆನ್ನಾಗಿರಲಿ ಹಾಗೂ ಮುಖ್ಯಮಂತ್ರಿ ಯಾಗಿ ಉತ್ತಮ ಆಡಳಿತ ನಡೆಸಲಿ ಈ ರಾಜ್ಯದ ಹಾಗೂ ಜಿಲ್ಲೆಯ ಅಭಿವೃದ್ಧಿ ಅವರ ಅವಧಿಯಲ್ಲಿ ಅಗಲಿ ಎಂದು ಪೂಜೆ ಸಲ್ಲಿಸಿ ಪ್ರಸಾದವನ್ನು ಶಾಸಕ ರಾಜೇಶ್ ನಾಯ್ಕ್ ಅವರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕೊಂಡು ಹೋಗಿದ್ದಾರೆ ಎಂದು ಶಾಸಕರ ಆಪ್ತ ವಲಯ ತಿಳಿಸಿದೆ.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ರಾದ ಯಶವಂತ ಪೊಳಲಿ, ಗಣೇಶ್ ಹಾಗೂ ಪ್ರಮುಖರಾದ ವೆಂಕಟೇಶ್ ನಾವಡ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...