Monday, June 30, 2025

ಡಿ.29: ಕಣಿಯೂರು ಕ್ಷೇತ್ರದಲ್ಲಿ ಶ್ರೀಶನೈಶ್ಚರ ಪೂಜೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಡಿ.29 ರಂದು ಲೋಕ ಕಲ್ಯಾಣಾರ್ಥವಾಗಿ ಶ್ರೀ ಮಹಾಬಲ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ನಡೆಯಲಿದೆ. ಮಧ್ಯಾಹ್ನ ಧಾರ್ಮಿಕ ಸಭೆ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಕನ್ಯಾನ ಕುಟ್ಟಿತ್ತಡ್ಕ ಶ್ರೀ ವಿಷ್ಣುಮೂರ್ತಿ ಕ್ಷೇತ್ರದ ಅಧ್ಯಕ್ಷ ರಾಜೀವ ಬೆಳ್ಚಾಡ ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರ ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ. ಟಿ.ಕೆ.ಭಟ್ ಬಳಗದವರಿಂದ ಭಕ್ತಿ ಪುಷ್ಪಾಂಜಲಿ ನಡೆಯಲಿದೆ.

More from the blog

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...