ಬೆಳ್ತಂಗಡಿ: ಕೋವಿಡ್-19 ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಭುಜಕ್ಕೆ ಭುಜ ಕೊಟ್ಟು ದುಡಿದ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿ ನೀಡಿದ ಆದೇಶವನ್ನು ರದ್ದುಗೊಳಿಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.

ಕೇವಲ ಕೊರೊನ ಸಂದರ್ಭದಲ್ಲಿ ಮಾತ್ರ ಅಲ್ಲ, ಬಂದೋಬಸ್ತ್, ಸಂಚಾರ ನಿಯಂತ್ರಣ, ಅತಿವೃಷ್ಟಿ ಹೀಗೆ ಪ್ರತಿ ವಿಪತ್ತಿನ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಜೊತೆ ಕೆಲಸ ಮಾಡುವ ಗ್ರಹರಕ್ಷಕ ಇಲಾಖೆಯ ಸಿಬ್ಬಂದಿಗಳನ್ನು ಆಯಾಯ ಇಲಾಖೆಗಳಲ್ಲಿಯೇ ಮುಂದುವರಿಸಬೇಕು ಎಂದು ಶಾಸಕರು ಮನವಿ ಪತ್ರದಲ್ಲಿ ಕೋರಿದ್ದಾರೆ.

