Sunday, July 13, 2025

ಅ.2: ರಾಷ್ರ್ಟೀಯ ಪೋಷಣೆ ಅಭಿಯಾನ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ರಾಷ್ರ್ಟೀಯ ಪೋಷಣೆ ಅಭಿಯಾನ್‌ ಕಾರ್‍ಯಕ್ರಮ ನಡೆಸಲಾಯಿತು. ಸಜೀಪದ ಮಾಚಿದೇವ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ| ಸುಬ್ರಹ್ಮಣ್ಯ ಭಟ್‌ ಆಯುರ್ವೆದ ತಜ್ಞರು ಇವರು ಸಮತೋಲಿತ ಆಹಾರದ ಮಾಹಿತಿ ನೀಡಿ ಅಪೌಷ್ಟಿಕತೆ ನಿವಾರಣೆಗೆ ನಮ್ಮಲ್ಲಿಯೇ ದೊರೆಯುವ ಸಮತೋಲಿತ ಆಹಾರದ ಅಗತ್ಯತೆ ಬಗ್ಗೆ ಮಾತನಾಡಿದರು. 40 ಮಹಿಳೆಯರು ಉಪಸ್ಥಿತರಿದ್ದರು.

ನೆಟ್ಲ ಸರಸ್ವತಿ ಸದನದಲ್ಲಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಆಯುರ್ವೇದ ವೈದ್ಯೆಡಾ| ಸಿಂಧು ಶ್ರೀ ಇವರು ಅಪೌಷ್ಟಿಕತೆ ನಿವಾರಿಸಲು ಯಾವಯಾವ ಆಹಾರಗಳನ್ನು ಮಕ್ಕಳು ಮತ್ತು ಮಹಿಳೆಯರು ಸೇವಿಸಬೇಕೆಂಬ ಸಂಪೂರ್ಣ ಮಾಹಿತಿಯನ್ನು ನೀಡಿದರು. ಮಕ್ಕಳು ಮತ್ತು ಮಹಿಳೆಯರು ಸೇರಿ 42 ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದರಾಷ್ರ್ಟೀಯ ಪೋಷಣ್‌ಅಭಿಯಾನ್‌ಕಾರ್ಯಕ್ರಮವನ್ನುಡಾ| ಸಂದೀಪ್.ಎಚ್.ಎಸ್. ಮಕ್ಕಳ ತಜ್ಞರು,ಹಾಗೂ ಡಾ| ಅನನ್ಯ ಲಕ್ಷ್ಮೀ ಸಂದೀಪ್‌ಇವರು ನಡೆಸಿಕೊಟ್ಟರು. ಗರ್ಭಿಣಿ ಸ್ತ್ರೀಯರು, ಸಣ್ಣ ಮಕ್ಕಳು, ಮಹಿಳೆಯರಲ್ಲಿ ಅಪೌಷ್ಟಿಕತೆಯಾಕೆ ಬರುತ್ತವೆ ಮತ್ತು ಹೋಗಲಾಡಿಸಲುಯಾವ ಆಹಾರಗಳನ್ನು ಸೇವಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು. ೬೦ ಮಂದಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿಭಾಗಾವಹಿಸಿರುವ ಎಲ್ಲರಿಗೂರೋಗ ನಿರೋಧಕ ಶಕ್ತಿ ಹೆಚ್ಚಿಸಲು ತಯಾರಿಸಿಕೊಳ್ಳಬಹುದಾದಕಷಾಯದಬಗ್ಗೆ ಪ್ರಾತ್ಯಕ್ಷಿಕೆ ಮಾಡಿ, ನಂತರಎಲ್ಲರಿಗೂಕುಡಿಯಲುಕಷಾಯ ನೀಡಲಾಯಿತು.

ಕಾರ್‍ಯಕ್ರಮದಲ್ಲಿರಾಷ್ಟ್ರ ಸೇವಿಕಾ ಸಮಿತಿಯ ಪ್ರಾಂತಕಾರ್ಯಕಾರಿಣಿ ಸದಸ್ಯೆಯಾಗಿರುವಡಾ| ಕಮಲಾ ಭಟ್ ಹಾಗೂ ಬಾಳ್ತಿಲ ಗ್ರಾಮ ಪಂಚಾಯತ್ ಸದಸ್ಯೆ ಹಿರಣ್ಮಯಿ, ಶಾಲಾಭಿವೃದ್ದಿ ಸಮಿತಿಯ ಸದಸ್ಯರು, ಶೈಕ್ಷಣಿಕ ಪರಿವೀಕ್ಷಕರು ಸುಧಾ ಭಟ್ ಮುಖ್ಯೋಪಾಧ್ಯಾಯರರಾದ ಶಾಂಭವಿ ಹಾಗೂ ಅಧ್ಯಾಪಕ ವೃಂದದವರು ಪಾಲ್ಗೊಂಡರು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...