Friday, June 27, 2025

ಪೋಷಣಾ ಮಾಸಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಹಾಗೂ ಬಿ ಕಸಬಾ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ,,*ಪೋಷಣಾ ಮಾಸಾಚರಣೆ*2021ರ ಅಂಗವಾಗಿ ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ, ಮತ್ತು ಮಾಹಿತಿ ಶಿಬಿರ , ಕಿಶೋರಿಯರಿಗೆ ಪೌಷ್ಟಿಕ ಆಹಾರ ಚಿತ್ರಕಲಾ ಸ್ಪರ್ಧೆ, ಸಾಧಾರಣ ಕಡಿಮೆ ತೂಕದ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ವಿತರಣೆ, ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ರೋಟರಿ ಕ್ಲಬ್ ಸಭಾಂಗಣ ಬಿಸಿರೋಡ್ ಇಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭೆಯ ಅಧ್ಯಕ್ಷ ಮಹಮ್ಮದ್ ಶರೀಫ್ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ರವೀಂದ್ರ ಕಂಬಳಿ ಪೋಷನ್ ಮಾಸಾಚರಣೆಯ ಉದ್ದೇಶಗಳು ಹಾಗೂ ಸಾಧಿಸಬೇಕಾದ ಗುರಿಗಳು ಹಾಗೂ ಪೋಷಣೆ ಯೋಜನೆಯ ಸದುದ್ದೇಶವನ್ನು ಎಲ್ಲ ಜನರಿಗೆ ಸಾಮುದಾಯಿಕವಾಗಿ ತಲುಪಿಸಬೇಕಾದ ಇಲಾಖೆ ಗುರಿ ಹೊಂದಿರುವುದರಿಂದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಸಹಕರಿಸಬೇಕೆಂದು ತಿಳಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಮಹಮ್ಮದ್ ವಳವೂರು ನೆರವೇರಿಸಿ ಇಲಾಖೆಯ ಅಂಗನವಾಡಿ ಕೇಂದ್ರಗಳ ಮುಖಾಂತರ ನಡೆಯುವ ಕಾರ್ಯಕ್ರಮಕ್ಕೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಡಾಕ್ಟರ್ ಶಶಿಕಲಾ ಸೋಮಯಾಜಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ *ಪೌಷ್ಟಿಕ ಆಹಾರದ ಅಗತ್ಯತೆ ಪ್ರಯೋಜನಗಳು ಗರ್ಭಿಣಿ ಭಾಣಂತಿಯರು ತೆಗೆದುಕೊಳ್ಳಬೇಕಾದ ಕ್ರಮಗಳು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು ಎದೆಹಾಲಿನ ಮಹತ್ವ ಹಾಗೂ ಶರೀರಕ್ಕೆ ಬೇಕಾದ ವಿವಿಧ ರೀತಿಯ ಪೌಷ್ಟಿಕ ಆಹಾರ ಕುರಿತಾಗಿ ಸಭೆಯನ್ನುದ್ದೇಶಿಸಿ ಸಭಿಕರಿಗೆ ಮಾಹಿತಿ ನೀಡಿದರು. ಹಾಗೂ ತಾಲೂಕು ಸಂರಕ್ಷಣಾಧಿಕಾರಿ ಭಾರತಿ ಬಿ ಮಹಿಳೆಯರಿಗೆ ಸಂರಕ್ಷಣೆ ದೃಷ್ಟಿಯಿಂದ ಇಲಾಖೆಯಿಂದ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ವೇದಿಕೆಯಲ್ಲಿ ಪುರಸಭೆಯಉಪಾಧ್ಯಕ್ಷರಾದ ಜೆಸಿಂತಾ, ರೋಟರಿ ಆನ್ಸ್ ನ ಕಾರ್ಯದರ್ಶಿಯವರಾದ ವಹಿದಾ ರೋಟರಿ ಕ್ಲಬ್ ನ ಕಾರ್ಯದರ್ಶಿಯಾದ ರಿತೇಶ್ ಬಾಳಿಗ ಹಾಗೂ ಎಲ್ಐಸಿ ಬ್ರಾಂಚ್
ಮ್ಯಾನೇಜರ್ ಸುಂದರ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಪೌಷ್ಟಿಕಾಹಾರ ಗಳ ಪ್ರಾತ್ಯಕ್ಷತೆ ನಡೆಸಲಾಯಿತು, ಹಾಗೆಯೇ ಕಿಶೋರಿಯರಿಗೆ *ಪೌಷ್ಟಿಕ ಕರ್ನಾಟಕ *ಚಿತ್ರ ಸ್ಪರ್ಧೆಯನ್ನು ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹಾಗೆಯೇ ಸಾಧನ ಕಡಿಮೆ ತೂಕದ ಮಕ್ಕಳಿಗೆ ಪ್ರೊಟೀನ್ ಪೌಡರ್ ವಿತರಿಸಲಾಯಿತು. ಹಾಗೂ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ವಸಂತಿ ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಹಾಗೂ ಬಂದಂತ ಎಲ್ಲಾ ಸಭಿಕರ ಆರೋಗ್ಯ ತಪಾಸಣೆಯನ್ನು ಸೋಮಯಾಜಿ ಆಸ್ಪತ್ರೆಯ ವೈದ್ಯರ ತಂಡ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಶಾಲಿನಿ ಸ್ವಾಗತಿಸಿ. ಭಾರತಿ ವಂದಿಸಿದರು.
ವಿಜಯವಾಣಿ ಶೆಟ್ಟಿ ನಿರೂಪಿಸಿದರು.

More from the blog

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

Installation Ceremony : ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ..

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ...

ಸತತ 3ನೇ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕೀರ್ತಿ ಆಯ್ಕೆ..

ವಿಟ್ಲ : ವಿಟ್ಲ ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಮಾದರಿ ಹಿರಿಯ ಪ್ರಾಥಮಿಕ...

Crop Insurance : ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ..

ಬಂಟ್ವಾಳ : ಕರಾವಳಿಯ ದಕ್ಸಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ...