Wednesday, February 12, 2025

ರೈತರಿಂದ ಅಂಚೆಕಾಡ್೯ ಚಳುವಳಿ

ಬಂಟ್ವಾಳ: ಬರದ ಛಾಯೆಯಿಂದ ನಲುಗುತ್ತಿರುವ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ರೈತ ಸಂಪರ್ಕ ಸಭೆಯನ್ನು ಏರ್ಪಡಿಸುವಂತೆ ಆಗ್ರಹಿಸಿ ಜಿಲ್ಲಾ ರೈತಸಂಘ ಹಸಿರು ಸೇನೆಯಿಂದ ಅಂಚೆಕಾರ್ಡ್ ಚಳುವಳಿ ನಡೆಯಿತು‌. ವಿಟ್ಲ ಸೀಮೆಯ ಅರಸು ವಂಶದ ಕೃಷ್ಣಯ್ಯ ಬಲ್ಲಾಳ್ ಅವರು ಈ ಚಳುವಳಿಗೆ ಚಾಲನೆ ನೀಡಿದರು.  ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು, ರಾಜ್ಯ ಕಾರ್ಯದರ್ಶಿ ಕುಮಾರ ಸುಬ್ರಮಣ್ಯ ಶಾಸ್ತ್ರಿ, ಮುರುವ ಮಹಾಬಲ ಭಟ್, ದಯಾನಂದ ಶೆಟ್ಟಿ ಕುಳವೂರು ಗುತ್ತು,ಸುಬ್ರಮಣ್ಯ ಭಟ್ ಸಜಿಪ, ಸುದೇಶ್ ಮಯ್ಯ ಪಾಣಮಂಗಳೂರು, ಎನ್.ಕೆ.ಇದಿನಬ್ಬ,ಶೇಕ್ ಅಬ್ದುಲ್ಲ ಕುಪ್ಪೆಪದವು, ಲಕ್ಷ್ಮಣ್ ಕುಲಾಲ್ ನಾಯಿಲ, ಯೂಸುಫ್ ಸಜಿಪ, ಸುದೇಶ್ ಭಂಡಾರಿ ಎರ್ಮೆನಿಲೆ, ಆನಂದ ಶೆಟ್ಟಿ ಸವಣೂರು, ವಿನ್ಸೆಂಟ್ ಕಡಬ ಮತ್ತಿತರ ರೈತರು ಈ ಹಕ್ಕೊತ್ತಾಯ ಚಳುವಳಿಯಲ್ಲಿ ಪಾಳ್ಗೊಂಡರು.
ಮುಂದಿನ ದಿನದಲ್ಲಿ  ಜಿಲ್ಲಾಢಳಿತಕ್ಕೆ ಎಚ್ಚರ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲೂ ರೈತರು ಅಂಚೆ ಕಾರ್ಡ್ ಚಳವಳಿ ನಡೆಸಲಿರುವರು ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಡಿಕಂಬಳಗುತ್ತು ಮನೋಹರ ಶೆಟ್ಟಿಯವರು ತಿಳಿಸಿದ್ದಾರೆ.

More from the blog

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...