ಬಂಟ್ವಾಳ: ಗ್ರಾಮ ಪಂಚಾಯತ್ ಗಳಲ್ಲಿನ ಬಸವ ವಸತಿ ಮನೆಗಳ ನಿರ್ಮಾಣ ಬಾಬ್ತು ವಸತಿ ನಿಗಮಕ್ಕೆ 1000 ಕೋಟಿ ಬಿಡುಗಡೆ,
ಕೃಷಿ, ತೋಟಗಾರಿಕೆಗೆ ಆದ್ಯತೆ, ಮೀನುಗಾರರಿಗೆ ದ್ವಿಚಕ್ರ ವಾಹನ ನೀಡಿಕೆ, ಪಿ.ಯು. ವಿದ್ಯಾರ್ಥಿಗಳಿಗೆ ಬಂಪರ್ ನೀಡುವ ಮೂಲಕ ಶಿಕ್ಷಣಕ್ಕೆ ಮಹತ್ವ,ಗ್ರಾಮೀಣ ರಸ್ಥೆಗಳ ಅಭಿವೃದ್ಧಿ, ಕುಡಿಯುವ ನೀರು ಯೋಜನೆಗೆ ಅನುದಾನ ನಿಗದಿ,ರೈತರ ಸಾಲಮನ್ನಾ ಬಾಕಿ ಹಣ ಬಿಡುಗಡೆ, ಸಣ್ಣ, ಅತೀ ಸಣ್ಣ ರೈತರಿಗೆ ಅನುಕೂಲ,ಎಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಐ.ಸಿ.ಯು. ಅಳವಡಿಕೆ, ಕ್ರೈಸ್ತ ಸಮದಾಯ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ, ರಾಜ್ಯದ ಪ್ರಸ್ತುತ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಅಶದಾಯಕ ಬಜೆಟ್ ಮಂಡಿಸಿದ್ದಾರೆ ಎಂದು ಬಂಟ್ವಾಳ ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಮೆಚ್ಚಗೆ ವ್ಯಕ್ತಪಡಿಸಿದರು.














