Friday, January 30, 2026

ಪಿಯುಸಿ ತರಗತಿ ಆರಂಭ ಮುಂದೂಡಿಕೆಗೆ ಪ್ರಭಾಕರ ಪ್ರಭು ಮನವಿ

ಬಂಟ್ವಾಳ: ಕರಾವಳಿಯ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ವರ್ಷ ತೀವ್ರ ತರವಾದ ಕುಡಿಯುವ ನೀರಿನ ಬವಣೆ ಉದ್ಭವಿಸಿದ್ದು, ಸರಕಾರಿ ಪಿಯುಸಿ ತರಗತಿಗಳ ಆರಂಭವನ್ನು ಜೂನ್ ಮೊದಲವಾರ ತನಕ ಮುಂದೂಡಿಕೆಗೆ ಬಂಟ್ವಾಳ ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಅವರು ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.
ನೀರಿನ ಸಮಸ್ಯೆಯಿಂದ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದೆ. ಪಿಯು ಕಾಲೇಜುಗಳಲ್ಲಿನ ಬಹುತೇಕ ಕುಡಿಯುವ ನೀರಿಗೆ ಸಂಬಂಽಸಿದ ಕೊಳವೆ ಬಾವಿಗಳು ಈಗಾಗಲೇ ಬತ್ತಿ ಹೋಗಿದ್ದು, ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಗಾಗಿ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳ ಆಡಳಿತಗಳು ನೀರಿನ ಅಭಾವದಿಂದ ತತ್ತರಿಸಿ ಹೋಗಿವೆ. ಬೇಸಿಗೆ ಕಾಲದ ಇತ್ತೀಚಿನ ತಾಪಮಾನ ಕೂಡಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರ ತನಕ ಕರಾವಳಿ ಜಿಲ್ಲೆಗೆ ಮುಂಗಾರು ಪ್ರಾರಂಭವಾಗುವ ಲಕ್ಷಣ ಕಡಿಮೆ ಎಂದು ತಿಳಿಸಿದೆ.
ಕೆಲವೊಂದು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಬಳಕೆಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಎದುರುಸುತ್ತಿವೆ.
ಈ ಎಲ್ಲಾ ಅಂಶಗಳನ್ನು ಮನಗಂಡು ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಸಭೆ ಸೇರಿ ಈಗಾಗಲೇ ಆರಂಭವಾಗಬೇಕಿದ್ದ ತರಗತಿಗಳನ್ನು ಸ್ವಲ್ಪ ಸಮಯಕ್ಕೆ ಮುಂದೂಡಿ ಪ್ರಕಟನೆ ಹೊರಡಿಸಿವೆ. ಪ್ರಸ್ತುತ ನೀರಿನ ಅಭಾವ ಪರಿಸ್ಥಿತಿಯನ್ನು ಅವಲೋಕಿಸಿ ಸರಕಾರಿ ಪಿಯುಸಿ ಕಾಲೇಜುಗಳ ಪ್ರಾಂಶುಪಾಲರ ಸಂಘ ಕೂಡಾ ಸ್ವಲ್ಪ ಸಮಯ ತರಗತಿ ಆರಂಭಿಸುವುದನ್ನು ಮುಂದೂಡಲು ನಿರ್ದೇಶಕರಲ್ಲಿ ಮನವಿ ಸಲ್ಲಿಸಿರುವುದು ತಿಳಿದು ಬಂದಿದೆ.
ಆದುದರಿಂದ ಈಗಾಗಲೇ ಆರಂಭವಾಗಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಪಿಯುಸಿ ತರಗತಿಗಳನ್ನು ತತ್‌ಕ್ಷಣದಿಂದ ಸ್ವಲ್ಪ ಮಟ್ಟಿಗೆ ಸ್ಥಗಿತಗೊಳಿಸಿ ಕನಿಷ್ಠ ಜೂನ್ ತಿಂಗಳ ಮೊದಲ ವಾರದವರೆಗೆ ಮುಂದೂಡಲು ಅವರು ವಿನಂತಿಸಿದ್ದಾರೆ.

 

 

 

More from the blog

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...