Wednesday, February 12, 2025

ಕಿಸಾನ್ ಸಮ್ಮಾನ್ ಅರ್ಜಿಸಲ್ಲಿಕೆ ವಿಸ್ತರಣೆಗೆ ಪ್ರಭಾಕರ ಪ್ರಭು ಮನವಿ

ಬಂಟ್ವಾಳ:  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ಸೆಪ್ಟಂಬರ್ ವರೆಗೆ ವಿಸ್ತರಿಸುವಂತೆ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.    ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರಿಗೂ ಮನವಿ ಸಲ್ಲಿರುವ ಅವರು ಈ ಬಗ್ಗೆ ಮುಖ್ಯ ಕಾರ್ಯದರ್ಶಿಯವರಿಗೆ ಮನವರಿಕೆ ಮಾಡುವಂತೆ ಕೋರಿದ್ದಾರೆ.
 ರೈತರಿಗೆ ಪ್ರೋತ್ಸಾಹ ನೀಡುವ ವಾರ್ಷಿಕ ೬೦೦೦ ಆರ್ಥಿಕ ನೆರವು ನೀಡುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಿಸಿದಂತೆ  ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಂದಿ ಸಣ್ಣ ಹಾಗೂ ಅತೀ ಸಣ್ಣ ಹಿಡುವಳಿ ಹೊಂದಿದ್ದು, ಸ್ವಂತ ಮತ್ತು ಜಂಟಿಯಾಗಿ ಇರುವ  ಎಲ್ಲಾ ಖಾತೆದಾರರ ಆಧಾರ್ ನಂಬ್ರ ಮತ್ತು ಬ್ಯಾಂಕ್ ಪಾಸ್ ಬುಕ್ ನಂಬ್ರ  ಜಮೀನಿನ ವಿವರ ಇತ್ಯಾದಿ ಮಾಹಿತಿ ಪಡೆದು ಪ್ರತಿ ರೈತರಿಂದ ಅರ್ಜಿ ಅನುಬಂಧ ಪಡೆಯಲು  ಕಾಲಾವಕಾಶದ ಅಗತ್ಯವಿದೆಯಲ್ಲದೆ ಕಂಪ್ಯೂಟರ್‌ನಲ್ಲಿ ಅಪ್ಲೋಡ್ ಮಾಡಲು ಸರ್ವರ್ ತಾಂತ್ರಿಕ ಕಾರಣಗಳಿಂದ ನಿಧಾನವಾಗುತ್ತಿದೆ ಎಂದು ಪ್ರಭು ಪತ್ರದಲ್ಲಿ ವಿವರಿಸಿದ್ದಾರೆ.
     ದ.ಕ. ಜಿಲ್ಲೆಯಲ್ಲಿ ಒಟ್ಟು ಅಂದಾಜು ೧.೮೩ ಲಕ್ಷ, ಬಂಟ್ವಾಳ ತಾ.ನಲ್ಲಿ ೫೨,೦೦೦ ರೈತ ಕುಟುಂಬಗಳಿದ್ದು ಒಟ್ಟಾರೆಯಾಗಿ ದ. ಕ. ಜಿಲ್ಲೆಯಲ್ಲಿ ೩೫,೦೦೦, ಹಾಗೂ  ಬಂಟ್ವಾಳ ತಾ.ನಲ್ಲಿ ೧೨,೦೦೦ ಅರ್ಜಿಗಳು  ಮಾತ್ರ     ಸ್ವೀಕೃತವಾಗಿದ್ದು, ಶೇ. ೨೫ ರಷ್ಟು ಸಹ ಪ್ರಗತಿಯಾಗಿರುವುದಿಲ್ಲ ಹಾಗಾಗಿ ಎಲ್ಲಾ ರೈತ ಕುಟುಂಬಗಳಿಗೆ ಆರ್ಥಿಕ ನೆರವು ದೊರೆಯುವಂತಾಗಲು  ಕೇಂದ್ರ ಸರಕಾರದ ಇಲಾಖೆಯೊಡನೆ ಸಮಾಲೋಚಿಸಿ ರಾಜ್ಯದಲ್ಲಿ ಅರ್ಜಿ ನೀಡುವ ದಿನಾಂಕವನ್ನು ಸೆಪ್ಟೆಂಬರ್ ೩೧ರವರೆಗೆ ವಿಸ್ತರಣೆ ಮಾಡುವಂತೆ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.                                       ಪತ್ರದ ಪ್ರತಿಯನ್ನು ಜಿಲ್ಲಾಧಿಕಾರಿ , ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೂ ರವಾನಿಸಿದ್ದಾರೆ.
Attachments area

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...