Friday, June 27, 2025

ಕಿಸಾನ್ ಸಮ್ಮಾನ್ ಅರ್ಜಿಸಲ್ಲಿಕೆ ವಿಸ್ತರಣೆಗೆ ಪ್ರಭಾಕರ ಪ್ರಭು ಮನವಿ

ಬಂಟ್ವಾಳ:  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ಸೆಪ್ಟಂಬರ್ ವರೆಗೆ ವಿಸ್ತರಿಸುವಂತೆ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.    ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರಿಗೂ ಮನವಿ ಸಲ್ಲಿರುವ ಅವರು ಈ ಬಗ್ಗೆ ಮುಖ್ಯ ಕಾರ್ಯದರ್ಶಿಯವರಿಗೆ ಮನವರಿಕೆ ಮಾಡುವಂತೆ ಕೋರಿದ್ದಾರೆ.
 ರೈತರಿಗೆ ಪ್ರೋತ್ಸಾಹ ನೀಡುವ ವಾರ್ಷಿಕ ೬೦೦೦ ಆರ್ಥಿಕ ನೆರವು ನೀಡುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಿಸಿದಂತೆ  ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಂದಿ ಸಣ್ಣ ಹಾಗೂ ಅತೀ ಸಣ್ಣ ಹಿಡುವಳಿ ಹೊಂದಿದ್ದು, ಸ್ವಂತ ಮತ್ತು ಜಂಟಿಯಾಗಿ ಇರುವ  ಎಲ್ಲಾ ಖಾತೆದಾರರ ಆಧಾರ್ ನಂಬ್ರ ಮತ್ತು ಬ್ಯಾಂಕ್ ಪಾಸ್ ಬುಕ್ ನಂಬ್ರ  ಜಮೀನಿನ ವಿವರ ಇತ್ಯಾದಿ ಮಾಹಿತಿ ಪಡೆದು ಪ್ರತಿ ರೈತರಿಂದ ಅರ್ಜಿ ಅನುಬಂಧ ಪಡೆಯಲು  ಕಾಲಾವಕಾಶದ ಅಗತ್ಯವಿದೆಯಲ್ಲದೆ ಕಂಪ್ಯೂಟರ್‌ನಲ್ಲಿ ಅಪ್ಲೋಡ್ ಮಾಡಲು ಸರ್ವರ್ ತಾಂತ್ರಿಕ ಕಾರಣಗಳಿಂದ ನಿಧಾನವಾಗುತ್ತಿದೆ ಎಂದು ಪ್ರಭು ಪತ್ರದಲ್ಲಿ ವಿವರಿಸಿದ್ದಾರೆ.
     ದ.ಕ. ಜಿಲ್ಲೆಯಲ್ಲಿ ಒಟ್ಟು ಅಂದಾಜು ೧.೮೩ ಲಕ್ಷ, ಬಂಟ್ವಾಳ ತಾ.ನಲ್ಲಿ ೫೨,೦೦೦ ರೈತ ಕುಟುಂಬಗಳಿದ್ದು ಒಟ್ಟಾರೆಯಾಗಿ ದ. ಕ. ಜಿಲ್ಲೆಯಲ್ಲಿ ೩೫,೦೦೦, ಹಾಗೂ  ಬಂಟ್ವಾಳ ತಾ.ನಲ್ಲಿ ೧೨,೦೦೦ ಅರ್ಜಿಗಳು  ಮಾತ್ರ     ಸ್ವೀಕೃತವಾಗಿದ್ದು, ಶೇ. ೨೫ ರಷ್ಟು ಸಹ ಪ್ರಗತಿಯಾಗಿರುವುದಿಲ್ಲ ಹಾಗಾಗಿ ಎಲ್ಲಾ ರೈತ ಕುಟುಂಬಗಳಿಗೆ ಆರ್ಥಿಕ ನೆರವು ದೊರೆಯುವಂತಾಗಲು  ಕೇಂದ್ರ ಸರಕಾರದ ಇಲಾಖೆಯೊಡನೆ ಸಮಾಲೋಚಿಸಿ ರಾಜ್ಯದಲ್ಲಿ ಅರ್ಜಿ ನೀಡುವ ದಿನಾಂಕವನ್ನು ಸೆಪ್ಟೆಂಬರ್ ೩೧ರವರೆಗೆ ವಿಸ್ತರಣೆ ಮಾಡುವಂತೆ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.                                       ಪತ್ರದ ಪ್ರತಿಯನ್ನು ಜಿಲ್ಲಾಧಿಕಾರಿ , ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೂ ರವಾನಿಸಿದ್ದಾರೆ.
Attachments area

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...