Wednesday, February 12, 2025

ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ

ಬಂಟ್ವಾಳ: ಪ್ರತಿಭೆಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂಅಡಕವಾಗಿರುತ್ತದೆ.ಅಂತಹ ಪ್ರತಿಭೆಗಳು ಹೊರಹೊಮ್ಮಲಿರುವಒಂದು ವಿಶಿಷ್ಟ ವೇದಿಕೆಯೇ’ ಪ್ರತಿಭಾಕಾರಂಜಿ’ ,ಈ ರೀತಿಯ ವೇದಿಕೆಗಳು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರಹೊಮ್ಮಲು, ಸಹಾಯಕವಾಗುವ ಒಂದುಅದ್ಭುತವಾದ ವ್ಯವಸ್ಥೆಯಾಗಿದೆ ಎಂದುಉದ್ಯಮಿ  ತುಂಬೆಯ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ  ಅಬ್ದುಲ್ ಸಲಾಂ ಹೇಳಿದರು.
ಬಂಟ್ವಾಳಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ತುಂಬೆ ವಿದ್ಯಾ ಸಂಸ್ಥೆಗಳು ಜಂಟಿಯಾಗಿ ಏರ್ಪಡಿಸಿದ್ದ ಬಂಟ್ವಾಳ ನಗರ ವಲಯ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವವನ್ನು ಉದ್ಘಾಟಿಸಿ  ಅವರು ಮಾತನಾಡಿದರು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕಿ ಸುಶೀಲಾ , ತುಂಬೆ ಸೆಂಟ್ರಲ್ ಸ್ಕೂಲ್‌ನ ರಕ್ಷಕ-ಶಿಕ್ಷಕ ಸಂಘದಅಧ್ಯಕ್ಷ ಬಶೀರ್ ತಂಡೇಲ್ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ತುಂಬೆಗ್ರಾಮ ಪಂಚಾಯತ್‌ ಅಧ್ಯಕ್ಷೆ  ಹೇಮಲತಾ ಜಿ. ಪೂಜಾರಿ ವಹಿಸಿದ್ದರು.
ಬಂಟ್ವಾಳ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ  ನಂದಾಎಸ್ತರ್,  ಉಷಾ,  ರೇಶ್ಮಾ, ಶಿಕ್ಷಣ ಸಂಯೋಜಕಿ  ಸುಶೀಲಾ, ತುಂಬೆ ಗ್ರಾಮ ಪಂಚಾಯತ್ ಸದಸ್ಯೆ  ಆತಿಕಾ ಬಾನು, ಸದಸ್ಯರಾದ ಝಹೂರ್, ತುಂಬೆ ಸೆಂಟ್ರಲ್ ಸ್ಕೂಲ್‌ನ ಪಿ.ಟಿ.ಎ.ಉಪಾಧ್ಯಕ್ಷ ನಿಸಾರ್‌ಅಹಮ್ಮದ್ ವಳವೂರು ಮತ್ತಿತರರು ಉಪಸ್ಥಿತರಿದ್ದರು.
ತುಂಬೆಕಾಲೇಜಿನ ಪ್ರಾಂಶುಪಾಲರಾದ  ಕೆ.ಎನ್‌ ಗಂಗಾಧರ ಆಳ್ವ ಪ್ರಸ್ತಾಪಿಸಿ, ಸ್ವಾಗತಿಸಿದರು.ತುಂಬೆ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶ್ರೀನಿವಾಸ ಕೆ. ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕ  ಜಗದೀಶರೈ ಬಿ., ನಿರೂಪಿಸಿದರು.  ಬಂಟ್ವಾಳ ನಗರ ವಲಯದ ವಿವಿಧ ಶಿಕ್ಷಣ ಸಂಸ್ಥೆಗಳ ಸುಮಾರು೪೫೦ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...