Monday, January 26, 2026

ಸರ್ವೀಸ್ ರಸ್ತೆಯಲ್ಲಿ ಬಸ್ ಸಂಚಾರಕ್ಕೆ ಪೋಲೀಸರಿಂದ ನಿರ್ಬಂಧ : ಆಟೋ ಚಾಲಕರು ಪೋಲೀಸರ ಮಧ್ಯೆ ವಾಗ್ವಾದ

ಬಂಟ್ವಾಳ: ಖಾಸಗಿ, ಸರಕಾರಿ ಬಸ್ ಗಳನ್ನು ಬಿ‌.ಸಿ‌.ರೋಡ್ ನ ಒಳರಸ್ತೆಗೆ ಸಂಚಾರವನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಬಿ.ಸಿ‌.ರೋಡ್-ಕೈಕಂಬ ಆಟೋ ರಿಕ್ಷಾ ಚಾಲಕರು ಸೋಮವಾರ ಇಲ್ಲಿನ ಮೇಲ್ಸೆತುವೆಯಲ್ಲಿ ದಿಢೀರನೆ ಪ್ರತಿಭಟನೆ ನಡೆಸಿದರು.
ಈ ಮೊದಲು ವಿವಿಧೆಡೆಯಿಂದ ಎಲ್ಲ ಬಸ್ ಗಳು ಬಿ‌.ಸಿ.ರೋಡ್ ನ ಜಂಕ್ಷನ್ ಗೆ ಬಂದು ತೆರಳುತ್ತಿದ್ದವು‌. ಇಲ್ಲಿನ ಪಕ್ಕದಲ್ಲಿ ಯೇ ಆಟೋ ರಿಕ್ಷಾ ತಂಗುದಾಣವಿದ್ದು , ಇದರಿಂದ ಆಟೊ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಸುಲಭವಾಗುತ್ತಿತ್ತು.
ಆದರೆ, ಇದೀಗ ಯಾವುದೇ ಮಾಹಿತಿ ನೀಡದೇ ದಿಢೀರನೆ ಬಸ್ ಗಳ ಸಂಚಾರವನ್ನು ನಿರ್ಬಂಧಿಸಿರುವುದು ಸರಿಯಲ್ಲ. ಇದರಿಂದ ಆಟೋ ಚಾಲಕರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಟೊ ಚಾಲಕರು ದೂರಿಕೊಂಡರು.
ಬಳಿಕ ಆಟೊ‌ಚಾಲಕರು ಹೆದ್ದಾರಿ ಯಲ್ಲಿ ಬರುತ್ತಿದ್ದ ಬಸ್ ಗಳನ್ನು ತಡೆದು ನಿಲ್ಲಿಸಿ, ಬಿ.ಸಿ‌.ರೋಡಿನ ಕೆಳರಸ್ತೆಯಲ್ಲಿ ಸಂಚರಿಸುವಂತೆ ಮುಂದಾದಾಗ ಪೊಲಿಸರು ತಡೆವೊಡ್ಡಿದರು.

ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಬಂಟ್ವಾಳ ಕ್ರೈಂ ಎಸ್ಸೈ ಸುಧಾಕರ್ ಜಿ‌.ತೋನ್ಸೆ ಧಾವಿಸಿ, ಆಟೊ ಚಾಲಕರೊಂದಿಗೆ ಮಾತುಕತೆ ನಡೆಸಿದರು.
ಬಸ್ ಗಳ ಸಂಚಾರ ನಿರ್ಬಂಧಿಸಿದಕ್ಕೆ ಆಟೊ ಚಾಲಕರು ಒಮ್ಮತದಿಂದ ಆಕ್ಷೇಪ ವ್ಯಕ್ತಪಡಿಸಿದಾಗ, ಬಂಟ್ವಾಳ ಎಎಸ್ಪಿ ಅವರ ನಿರ್ದೇಶನ ಮೇರೆಗೆ ಬಿ.ಸಿ.ರೋಡ್ ಒಳರಸ್ತೆಯಲ್ಲಿ ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಎಎಸ್ಪಿ ಅವರೊಂದಿಗೆ ಮಾತುಕತೆಗೆ ತೆರಳುವಂತೆ ಹಾಗೂ ಪ್ರತಿಭಟನೆಯನ್ನು ಕೈಬಿಡುವಂತೆ ಎಸ್ಸೈ ಸುಧಾಕರ್ ಅವರು ಚಾಲಕರಿಗೆ ತಿಳಿಸಿದರು.
ಬಳಿಕ ಆಟೊ ಚಾಲಕರು ಪ್ರತಿಭಟನೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ಎಎಸ್ಪಿ ಕಚೇರಿಯತ್ತ ತೆರಳಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...