ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪುರಾಣ ವಾಚನ- ಪ್ರವಚನ ಕಾರ್ಯಕ್ರಮವನ್ನು ಗುರುವಾರ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.
ಕುಮಾರವ್ಯಾಸ ಮಹಾ ಕವಿಯ ಕರ್ನಾಟಕ ಭಾರತ ಕಥಾ ಮಂಜರಿಯ ಆಯ್ದ ಭಾಗವನ್ನು ದಿವಾಕರ ಆಚಾರ್ ವಾಚನ ಮಾಡಿದರು ಹಾಗೂ ಉಜಿರೆ ಅಶೋಕ ಭಟ್ ಪ್ರವಚನ ನೀಡಿದರು.
ಶ್ರದ್ಧಾ ಅಮಿತ್, ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣರಾವ್, ಎ.ವಿ. ಶೆಟ್ಟಿ, ಭುಜಬಲಿ ಮತ್ತು ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಗಂಟೆ 6.30 ರಿಂದ 8ರ ತನಕ ಪುರಾಣ ವಾಚನ-ಪ್ರವಚನ ನಡೆಯುತ್ತದೆ.














