Friday, June 27, 2025

ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಪ್ರಕರಣ : ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಹಿನ್ನೆಲೆಯಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್‌ ಹಾಲ್‌ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣ ಸಂಬಂಧ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ| ಕೃಷ್ಣ ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ನೀಡಿದೆ.

ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿ ಇನ್‌ಸ್ಪೆಕ್ಟರ್‌ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರಿಗೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನುಬಾಹಿರ ಎಂಬ ಅರ್ಜಿದಾರರ ಪರ ವಕೀಲರ ವಾದ ಮಾನ್ಯ ಮಾಡಿದ ನ್ಯಾಯಾಲಯ ಸೂಲಿಬೆಲೆ ವಿರುದ್ಧದ ಪ್ರಕರಣವನ್ನು ರದ್ದು ಗೊಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್‌, ಫ್ರೀಡಂ ಪಾರ್ಕ್‌ ಹೊರತುಪಡಿಸಿ ಬೆಂಗಳೂರಿನ ಇತರ ಭಾಗದಲ್ಲಿ ಪ್ರತಿಭಟನೆ ನಡೆಸಬಾರದೆಂದು ಆದೇಶವಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್‌ಹಾಲ್‌ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ ಭಂಗ ಉಂಟು ಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್‌.ಜೆ.ಪಾರ್ಕ್‌ ಠಾಣೆಯ ಇನ್‌ಸ್ಪೆಕ್ಟರ್‌ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಆದರೆ, ನಿಯಮದ ಪ್ರಕಾರ ಇನ್‌ಸ್ಪೆಕ್ಟರ್‌ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಹಾಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದರು.

 

ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ 2022ರ ಜು.28ರಂದು ಟೌನ್‌ ಹಾಲ್‌ ಮುಂಭಾಗ ಹಿಂದೂ ಹಿತರಕ್ಷಣ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜೆಹಾದಿಗಳಿಗೆ ಧಿಕ್ಕಾರ, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್‌ ನೆಟ್ಟಾರ್‌ ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್‌ ಮಾಡಬೇಕು’ ಎಂದು ಘೋಷಣೆ ಕೂಗಿದ್ದರು.

More from the blog

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

ತುಳು ನಾಟಕ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮ.. 

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ...

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ..

ಮಂಗಳೂರು : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ವತಿಯಿಂದ 2025 ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾಮಟ್ಟದಲ್ಲಿ...

ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ವಿಟ್ಲ: ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ 18 ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ...