Friday, June 27, 2025

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿ ಮೊಹಮದ್ ಜಬೀರ್‌ಗೆ ಜಾಮೀನು ನಿರಾಕರಣೆ

ಬೆಂಗಳೂರು: ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21ನೇ ಆರೋಪಿ ಮೊಹಮದ್ ಜಬೀರ್‌ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.

ಈ ಸಂಬಂಧ ಎನ್‌ಐಎ ವಿಶೇಷ ನ್ಯಾಯಾಲಯದ ಪ್ರಶ್ನಿಸಿ ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಮೊಹಮದ್‌ ಜಬೀರ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.

ಎನ್‌ಐಎ ಪರ ಪಿ.ಪ್ರಸನ್ನ ಕುಮಾರ್ ಮಂಡಿಸಿದ್ದ ವಾದ ಮನ್ನಿಸಿರುವ ನ್ಯಾಯಪೀಠ, ‘ಡೀಫಾಲ್ಟ್ ಜಾಮೀನು ಕೋರಿರುವ ಅರ್ಜಿದಾರರ ಕೋರಿಕೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ವೇಳೆ ಅರ್ಜಿದಾರರನ್ನು ಕಸ್ಟಡಿಗೆ ಪಡೆಯಲು ಸೂಕ್ತ ಮತ್ತು ನಿರ್ದಿಷ್ಟ ಕಾರಣ ನೀಡಲಾಗಿಲ್ಲ ಎಂದು ಅರ್ಜಿದಾರರು ಕೋರದೇ ಇರುವುದರಿಂದ ಅದನ್ನು ಪರಿಶೀಲನೆ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ವಿವರಿಸಿರುವುದು ಸರಿಯಾಗಿದೇ ಇದೆ. ಹೀಗಾಗಿ ಮೊಹಮದ್‌ ಜಬೀರ್ ಸಲ್ಲಿಸಿರುವ ಈ ರಿಟ್‌ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ನ್ಯಾಯಪೀಠ ಹೇಳಿದೆ.

‘ಆರೋಪಿಯ ಕಸ್ಟಡಿ ಅವಧಿ ವಿಸ್ತರಿಸಬೇಕು ಎಂದು ಕೋರಿ ಒಂದೆಡೆ ಎನ್ಐಎ ಅರ್ಜಿ ಸಲ್ಲಿಸಿದ್ದರೆ ಮತ್ತೊಂದೆಡೆ, ಡೀಫಾಲ್ಟ್ ಜಾಮೀನು ಕೋರಿ ಅರ್ಜಿದಾರರೂ ಅದೇ ದಿನ ಇನ್ನೊಂದು ಅರ್ಜಿ ಸಲ್ಲಿಸಿದ್ದಾರೆ. ಎರಡೂ ಅರ್ಜಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಒಂದೇ ದಿನ ವಿಚಾರಣೆ ನಡೆಸಿದೆ. ಅಂತೆಯೇ, ಅರ್ಜಿದಾರರ ಕಸ್ಟಡಿ ವಿಸ್ತರಣೆ ಕೋರಿ ನಿರ್ದಿಷ್ಟ ಕಾರಣಗಳನ್ನು ಒಳಗೊಂಡ ಮನವಿಯನ್ನು ಎನ್ಐಎ ಸಲ್ಲಿಸಿದ ಕಾರಣ ವಿಶೇಷ ನ್ಯಾಯಾಲಯ ಎನ್ಐಎ ಅರ್ಜಿಯನ್ನು ಪುರಸ್ಕರಿಸಿರುವುದು ಕೂಡಾ ಸಮರ್ಪಕವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಮೊಹಮದ್‌ ಜಬೀರ್‌ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 302, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು 2022ರ ನವೆಂಬರ್ 7ರಂದು ಬಂಧಿಸಲಾಗಿತ್ತು.

More from the blog

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Installation Ceremony : ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ..

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ...