Thursday, June 26, 2025

ಮೂಕ ಪ್ರಾಣಿಯ ಹತ್ಯೆಗೈದ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

ಕೇರಳ : ಅನನಾಸಿನಲ್ಲಿ ಪಟಾಕಿ ಇಟ್ಟು ಗರ್ಭಿಣಿ ಆನೆಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಕೆಲಸ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜನತೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ ನೀಡಿದ್ದು, ಈಗಾಗಲೇ ದುಷ್ಟರ ಪತ್ತೆಗೆ ಉನ್ನತ ಮಟ್ಟದ ತಂಡವೊಂದನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
​ಕೇರಳದ ಚೀಫ್​ ವೈಲ್ಡ್​ಲೈಫ್​ ವಾರ್ಡನ್​ ಸುರೇಂದ್ರ ಕುಮಾರ್​ ಈ ಬಗ್ಗೆ ಪ್ರತಿಕ್ರಿಯಿಸಿ,
ಇದೊಂದು ಉದ್ದೇಶಪೂರ್ವಕ ಕೃತ್ಯ, ಗರ್ಭಿಣಿ ಆನೆಯನ್ನು ಹತ್ಯೆ ಮಾಡಿದ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ದುಷ್ಟರ ಬಂಧನ ಆಗೋವರೆಗೂ ನಮಗೆ ನೆಮ್ಮದಿ ಇಲ್ಲ. ಎಲ್ಲರೂ ಅವರ ಬಂಧನದ ಸುದ್ದಿಯನ್ನು ಶೀಘ್ರದಲ್ಲೇ ಕೇಳುತ್ತೀರಿ ಎಂದು ಆಶ್ವಾಸನೆ ನೀಡಿದರು.
ಮಲಪ್ಪುರಂ ಜಿಲ್ಲೆಯ ಸೈಲೆಂಟ್​ ವ್ಯಾಲಿಯಲ್ಲಿ ಆಹಾರ ಹುಡುಕುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಅನಾನಸು ಹಣ್ಣಿನಲ್ಲಿ ಪಟಾಕಿ ತುಂಬಿ ತಿನ್ನಲು ಕೊಟ್ಟು ಅನೆಯ ಬಾಯಿ ಸಿಡಿಯುವಂತೆ ಮಾಡಿದ್ದರು. ನೋವು ತಾಳಲಾರದ ಆನೆ ಯಾರಿಗೂ ಹಾನಿ ಮಾಡದೆ ಪಕ್ಕದಲ್ಲೇ ಹರಿಯುವ ನದಿ ನೀರಿನಲ್ಲಿ ನಿಂತು ಪ್ರಾಣ ಬಿಟ್ಟಿತ್ತು. ಈ ಘಟನೆ ಬಗ್ಗೆ ಅರಣ್ಯ ಅಧಿಕಾರಿ ಮೋಹನ್ ಕೃಷ್ಣನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ವೈರಲ್ ಆಗಿ ದೇಶಾದ್ಯಂತ ಗರ್ಭಿಣಿ ಆನೆ ಸಾವಿಗೆ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...