Wednesday, February 12, 2025

ಬಂಟ ಸಮುದಾಯದವರಿಂದ ಪ್ರಾರಂಭವಾದ ವಿಜಯ ಬ್ಯಾಂಕ್ ವಿಲೀನ : ಹರಿಕೃಷ್ಣ ಬಂಟ್ವಾಳ್ ಸಮರ್ಥನೆಗೆ ಬೇಬಿ ಕುಂದರ್ ಖಂಡನೆ

ಬಂಟ್ವಾಳ: ಕೇಂದ್ರ ಸರಕಾರದ ಬ್ಯಾಂಕ್ ಅಪ್ ಬರೋಡ ದ ಜೊತೆ ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನ ಗೊಳಿಸಿರುವುದನ್ನು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್ ಖಂಡಿಸಿದ್ದಾರೆ.
ಬ್ಯಾಂಕಿಂಗ್ ಬಗ್ಗೆ ಜ್ಞಾನ ಇಲ್ಲದ ಹರಿಕೃಷ್ಣ ಬಂಟ್ವಾಳ್ ವಿಜಯ ಬ್ಯಾಂಕ್ ವಿಲೀನ ವನ್ನು ಸಮರ್ಥಿಸಿರುವುದು ಖಂಡನೀಯ, ಹೆಚ್ಚು ಶಾಖೆಗಳನ್ನು ಹೊಂದಿ 2000 ಕೋಟಿ ಗಿಂತಲೂ ಹೆಚ್ಚು ನಷ್ಟದಲ್ಲಿರುವ ಬ್ಯಾಂಕ್ ಆಪ್ ಬರೋಡ ಬ್ಯಾಂಕ್ ನ್ನು ಲಾಭದಾಯಕ ಮತ್ತು ಆರ್ಥಿಕವಾಗಿ ಬಲಿಷ್ಟವಿರುವ ವಿಜಯ ಬ್ಯಾಂಕನ್ನು ಇತರೆ ಬ್ಯಾಂಕ್ ನೊಂದಿಗೆ ವಿಲೀನ ಗೊಳಿಸಿರುವುದು ಅವೈಜ್ಞಾನಿಕ ವಾಗಿದೆ ಎಂದು ಕುಂದರ್ ಆರೋಪ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಪ್ರತಿಷ್ಟಿತ ವಿಜಯ ಬ್ಯಾಂಕನ್ನು ವಿಲೀನ ಗೊಳಿಸಿರುವ ಬಗ್ಗೆ ಲೋಕಸಭೆಯ ಅಧಿವೇಶನದಲ್ಲಿ ಚಕಾರವೆತ್ತದ ಲೋಕ ಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ವಿಜಯ ಬ್ಯಾಂಕ್ ಸ್ಥಾಪಕರಿಗೆ ಮತ್ತು ಲಕ್ಷಾಂತರ ಗ್ರಾಹಕರಿಗೆ ಮತ್ತು ಬಂಟ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಅವರು ತಿಳಿಸಿದ್ದಾರೆ.
ಬಾವುಟಗುಡ್ಟೆಯ ಲೈಟ್ ಹೌಸ್ ಹಿಲ್ ರಸ್ತೆಗೆ ಮೂಲ್ಕಿ ಸುಂದರರಾಮ್ ಶೆಟ್ಟಿಯವರ ಹೆಸರು ಇಡುವ ಬಗ್ಗೆ ಗೊಂದಲ ಸ್ರಷ್ಟಿಸಿದ ಬಿಜೆಪಿ ನಾಯಕರು ವಿಜಯ ಬ್ಯಾಂಕ್ ನ ಅಸ್ಥಿತ್ವಕ್ಕೆ ಧಕ್ಕೆಯಾದಾಗ ಮೌನವಹಿಸಿರುವುದು ಖಂಡನೀಯ ಎಂದ ಅವರು ವಿಜಯ ಬ್ಯಾಂಕ್ ವಿಲೀನದ ಬಗ್ಗೆ ಬಹಿರಂಗ ‌ಚರ್ಚೆಗೆ ಬರುವಂತೆ‌ ಹರಿಕೃಷ್ಣ ಬಂಟ್ವಾಳ್ ಅವರಿಗೆ ಸವಾಲು ಹಾಕಿದ್ದಾರೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...