Sunday, July 13, 2025

ಬಂಟ ಸಮುದಾಯದವರಿಂದ ಪ್ರಾರಂಭವಾದ ವಿಜಯ ಬ್ಯಾಂಕ್ ವಿಲೀನ : ಹರಿಕೃಷ್ಣ ಬಂಟ್ವಾಳ್ ಸಮರ್ಥನೆಗೆ ಬೇಬಿ ಕುಂದರ್ ಖಂಡನೆ

ಬಂಟ್ವಾಳ: ಕೇಂದ್ರ ಸರಕಾರದ ಬ್ಯಾಂಕ್ ಅಪ್ ಬರೋಡ ದ ಜೊತೆ ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನ ಗೊಳಿಸಿರುವುದನ್ನು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್ ಖಂಡಿಸಿದ್ದಾರೆ.
ಬ್ಯಾಂಕಿಂಗ್ ಬಗ್ಗೆ ಜ್ಞಾನ ಇಲ್ಲದ ಹರಿಕೃಷ್ಣ ಬಂಟ್ವಾಳ್ ವಿಜಯ ಬ್ಯಾಂಕ್ ವಿಲೀನ ವನ್ನು ಸಮರ್ಥಿಸಿರುವುದು ಖಂಡನೀಯ, ಹೆಚ್ಚು ಶಾಖೆಗಳನ್ನು ಹೊಂದಿ 2000 ಕೋಟಿ ಗಿಂತಲೂ ಹೆಚ್ಚು ನಷ್ಟದಲ್ಲಿರುವ ಬ್ಯಾಂಕ್ ಆಪ್ ಬರೋಡ ಬ್ಯಾಂಕ್ ನ್ನು ಲಾಭದಾಯಕ ಮತ್ತು ಆರ್ಥಿಕವಾಗಿ ಬಲಿಷ್ಟವಿರುವ ವಿಜಯ ಬ್ಯಾಂಕನ್ನು ಇತರೆ ಬ್ಯಾಂಕ್ ನೊಂದಿಗೆ ವಿಲೀನ ಗೊಳಿಸಿರುವುದು ಅವೈಜ್ಞಾನಿಕ ವಾಗಿದೆ ಎಂದು ಕುಂದರ್ ಆರೋಪ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಪ್ರತಿಷ್ಟಿತ ವಿಜಯ ಬ್ಯಾಂಕನ್ನು ವಿಲೀನ ಗೊಳಿಸಿರುವ ಬಗ್ಗೆ ಲೋಕಸಭೆಯ ಅಧಿವೇಶನದಲ್ಲಿ ಚಕಾರವೆತ್ತದ ಲೋಕ ಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ವಿಜಯ ಬ್ಯಾಂಕ್ ಸ್ಥಾಪಕರಿಗೆ ಮತ್ತು ಲಕ್ಷಾಂತರ ಗ್ರಾಹಕರಿಗೆ ಮತ್ತು ಬಂಟ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಅವರು ತಿಳಿಸಿದ್ದಾರೆ.
ಬಾವುಟಗುಡ್ಟೆಯ ಲೈಟ್ ಹೌಸ್ ಹಿಲ್ ರಸ್ತೆಗೆ ಮೂಲ್ಕಿ ಸುಂದರರಾಮ್ ಶೆಟ್ಟಿಯವರ ಹೆಸರು ಇಡುವ ಬಗ್ಗೆ ಗೊಂದಲ ಸ್ರಷ್ಟಿಸಿದ ಬಿಜೆಪಿ ನಾಯಕರು ವಿಜಯ ಬ್ಯಾಂಕ್ ನ ಅಸ್ಥಿತ್ವಕ್ಕೆ ಧಕ್ಕೆಯಾದಾಗ ಮೌನವಹಿಸಿರುವುದು ಖಂಡನೀಯ ಎಂದ ಅವರು ವಿಜಯ ಬ್ಯಾಂಕ್ ವಿಲೀನದ ಬಗ್ಗೆ ಬಹಿರಂಗ ‌ಚರ್ಚೆಗೆ ಬರುವಂತೆ‌ ಹರಿಕೃಷ್ಣ ಬಂಟ್ವಾಳ್ ಅವರಿಗೆ ಸವಾಲು ಹಾಕಿದ್ದಾರೆ.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...