Saturday, June 28, 2025

ಹಲವು ಯೋಜನೆಗಳೊಂದಿಗೆ ಕಸಾಪವನ್ನು ಜನಸಾಮಾನ್ಯರ ಪರಿಷತ್ತಾಗಿ ಪರಿವರ್ತಿಸುವುದೇ ನನ್ನ ಗುರಿ: ಕಸಾಪ ಜಿಲ್ಲಾಧ್ಯಕ್ಷ ಸೇವಾಕಾಂಕ್ಷಿ ಡಾ| ಎಂ.ಪಿ.ಶ್ರೀನಾಥ್

ಬಂಟ್ವಾಳ: ಸಾಹಿತ್ಯ, ನಾಡು-ನುಡಿ, ನೆಲ-ಜಲದ ಕುರಿತು ಕಳೆದ ಹಲವು ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ತಾನು ಕನ್ನಡ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಹಲವು ಯೋಜನೆಗಳೊಂದಿಗೆ ಕಸಾಪವನ್ನು ಜನಸಾಮಾನ್ಯರ ಪರಿಷತ್ತಾಗಿಸುವ ಪರಿವರ್ತಿಸುವುದೇ ತನ್ನ ಪ್ರಮುಖ ಉದ್ದೇಶ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿ ಡಾ| ಎಂ.ಪಿ.ಶ್ರೀನಾಥ್ ಹೇಳಿದರು.

ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ದ.ಕ.ಜಿಲ್ಲಾ ಕಸಾಪವನ್ನು ಕ್ರೀಯಾಶೀಲವಾಗಿ ಕಟ್ಟುವ ಹಾಗೂ ಪುನರ್ ರೂಪಿಸುವ ಅಗತ್ಯವಿದ್ದು, ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಆದ್ಯತೆ ನೀಡುವುದು ಅಗತ್ಯವಾಗಿದೆ. ಪ್ರತಿಭಾವಂತ ಸಾಹಿತಿಗಳನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ಕಾರ್ಯವೂ ಆಗಬೇಕಿದೆ.

ಜತೆಗೆ ಪರಿಷತ್ತಿನ ಸದಸ್ಯತ್ವ ಹೆಚ್ಚಳದ ಅಗತ್ಯವಿದ್ದು, ಅದರ ಕಾರ್ಯವನ್ನೂ ಮುಂದೆ ನಡೆಸಲಿದ್ದೇನೆ. ಹೀಗೆ ಹಲವಾರು ಯೋಜನೆಗಳನ್ನು ಮುಂದಿಟ್ಟುಕೊಂಡು ಸ್ಪರ್ಧೆಗೆ ಇಳಿದಿದ್ದು, ಜಿಲ್ಲೆಯಲ್ಲಿ ಸುಮಾರು ೪೫೦೦ ಮಂದಿ ಪರಿಷತ್ತಿನ ಸದಸ್ಯರಿದ್ದು, ಬಂಟ್ವಾಳ ತಾಲೂಕಿನಲ್ಲಿ ೪೦೦ಕ್ಕೂ ಅಽಕ ಮಂದಿ ಸದಸ್ಯರಿದ್ದಾರೆ. ಅವರೆಲ್ಲರನ್ನೂ ತಲುಪುವ ಪ್ರಯತ್ನ ಮಾಡಿ ಬೆಂಬಲಿಸುವಂತೆ ತಿಳಿಸಲಾಗುತ್ತಿದೆ.

೨೬ ವರ್ಷಗಳ ಭೋದನಾ ಅನುಭವದ ಜತೆಗೆ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳನ್ನು ಸಂಘಟಿಸಿದ ಅನುಭವವಿದೆ. ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳೂ ಸೇರಿದಂತೆ ಅನೇಕ ಸಾಹಿತ್ಯ ಸಮ್ಮೇಳನಗಳಲ್ಲಿ ದುಡಿದಿದ್ದು, ೨೦೦೯ರ ವಿಶ್ವ ತುಳು ಸಮ್ಮೇಳನದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇವೆ. ಜೇಸಿಐ ಅಧ್ಯಕ್ಷ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ಸಕ್ರೀಯನಾಗಿ ದುಡಿದಿದ್ದು, ಈ ಎಲ್ಲಾ ಅನುಭವಗಳೊಂದಿಗೆ ಸ್ಪರ್ಧೆಗೆ ಇಳಿದಿದ್ದು, ಪರಿಷತ್ತಿನ ಸದಸ್ಯರು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ, ಮಂಜು ವಿಟ್ಲ, ಸುಭಾಶ್ಚಂದ್ರ ಜೈನ್, ಜಯಾನಂದ ಪೆರಾಜೆ, ವಿಶ್ವನಾಥ್ ಬಂಟ್ವಾಳ ಉಪಸ್ಥಿತರಿದ್ದರು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...