Friday, July 4, 2025

ಬೆಳಕಿಗೆ ಬಾರದ ಹಳ್ಳಿಯ ಸಾಹಿತಿಗಳಿಗೆ ಅವಕಾಶ ನೀಡುವುದು, ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಾಣ: ಕಸಾಪ ಜಿಲ್ಲಾಧ್ಯಕ್ಷ ಆಕಾಂಕ್ಷಿ ಎಂ.ಆರ್.ವಾಸುದೇವ

ಬಂಟ್ವಾಳ: ವಿಮಾನ ನಿಲ್ದಾಣ ನಿರ್ದೇಶಕನಾಗಿ ನಿವೃತ್ತನಾದ ಮೇಲೆ ಪೂರ್ಣಪ್ರಮಾಣದಲ್ಲಿ ಸಾಹಿತ್ಯ ಚಟುವಟಿಕೆ, ಸಂಘಟನೆಯಲ್ಲಿ ಪ್ರವೃತ್ತನಾಗಿದ್ದು, ಜಿಲ್ಲಾಧ್ಯಕ್ಷನಾಗಿ ಗೆದ್ದರೆ ದಿನಪೂರ್ತಿ ಸೇವೆ ಸಲ್ಲಿಸಲು ಬದ್ಧ, ಸುಮಾರು 1500ಕ್ಕೂ ಅಧಿಕ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದ್ದು, ಮತದಾರರು ಉತ್ತಮ ಸ್ಪಂದನೆ ತೋರಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಎಂ.ಆರ್.ವಾಸುದೇವ ತಿಳಿಸಿದ್ದಾರೆ.

ಬಂಟ್ವಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಹಲವರು ಆ ವಿಳಾಸದಲ್ಲಿ ಇಲ್ಲ ಎಂಬುದು ಜಿಲ್ಲಾ ಸಂಚಾರದಿಂದ ಗೊತ್ತಾಯಿತು. ಭವಿಷ್ಯದಲ್ಲಿ ಯುವಕರನ್ನು ಹೆಚ್ಚು ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು, ಬೆಳಕಿಗೆ ಬಾರದ ಹಳ್ಳಿಯ ಸಾಹಿತಿಗಳಿಗೆ ಅವಕಾಶ ನೀಡುವುದು, ಕನ್ನಡ ಭವನ ಜಿಲ್ಲೆಯಲ್ಲಿ ನಿರ್ಮಾಣ ಸಹಿತ ವಿವಿಧ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು. ಸಾಹಿತ್ಯ ಪರಿಷತ್ ಅಧ್ಯಕ್ಷನಾಗುವವ ಫುಲ್ ಟೈಮ್ ಆಗಿ ಕೆಲಸ ಮಾಡಿದರೆ ಪರಿಷತ್ತನ್ನು ಸಕ್ರಿಯವಾಗಿರಿಸಬಹುದು ಎಂದವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಕೈಯೂರು ನಾರಾಯಣ ಭಟ್, ಜಯಂತ್ ನಾಯಕ್, ಉಮ್ಮರ್ ಮಂಚಿ, ಜಯರಾಮ ಪೂಜಾರಿ, ಅನಾರು ಕೃಷ್ಣ ಶರ್ಮ, ಬದ್ರುದ್ದೀನ್, ಕೃಷ್ಣ, ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.

More from the blog

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...