Thursday, February 13, 2025

ಪಂಚಿಂಗ್ ಡೈಲಾಗ್ ಮಾತ್ರ ಸಾಧನೆ : ಅಶ್ವನಿಕುಮಾರ್ ರೈ

ಬಂಟ್ವಾಳ: ಕಳೆದ ಐದು ವರ್ಷದ ಅವಧಿಯಲ್ಲಿ ಮೋದಿ ಸರಕಾರದ ಎಲ್ಲಾ ರಂಗದಲ್ಲೂ ವಿಫಲವಾಗಿದ್ದು, ಕೇವಲ ಪಂಚಿಂಗ್ ಡೈಲಾಗ್ ಹೊಡೆದದಷ್ಟೆ ಇವರ ಸಾಧನೆಯಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಅಶ್ವನಿ ಕುಮಾರ್ ರೈ ಟೀಕಿಸಿದ್ದಾರೆ. ಸೋಮವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಈ ಬಾರಿಯ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಅಳಿವು , ಉಳಿವಿಗೆ ನಡೆಯುವ ಚುನಾವಣೆಯಾಗಿದೆ ಎಂದರು.  ಜಿಎಸ್‌ಟಿ, ನೋಟ್ ಬ್ಯಾನ್  ಕಾರ್ಯಕ್ರಮವನ್ನು   ಜಾರಿ ಮಾಡಿರುವ ರೀತಿ ಸರಿ ಇಲ್ಲ. ಉದ್ಯೋಗ ಸೃಷ್ಟಿಸುವ ಕೆಲಸವಾಗಿಲ್ಲ. ವಿಪಕ್ಷಗಳ ವಿರುದ್ದ ಅಪಪ್ರಚಾರದಿಂದಲೇ ಆಡಳಿತಕ್ಕೆ ಬಂದಿದ್ದಾರೆ ಎಂದು ಹೇಳಿದ ಅವರು ಮೋದಿ ಸರಕಾರ ಕೇವಲ ಘೋಷಣೆಗಳ ಸರಕಾರವಾಗಿದೆ ಎಂದರು.  ಮಂಗಳೂರು ಲೋಕಸಭಾ ಕ್ಷೇತ್ರವು 1991ರಿಂದ ಬಿಜೆಪಿಯ ಪಾಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯಾಗಲಿಲ್ಲ. ಕಾಂಗ್ರೆಸ್ ಈ ಬಾರಿ ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಒಳ್ಳೆಯ ಯುವ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ ಎಂದರು. ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವದ ಗುಣಮೈಗೂಡಿಸಿರುವ ಅಭ್ಯರ್ಥಿ ಮಿಥುನ್ ರೈ ಅವರು ಜಿಲ್ಲೆಯಲ್ಲಿ ಬದಲಾವಣೆಯನ್ನು ಜನರು ಬಯಸಿದ್ದು,  ಪಕ್ಷದ ಕಾರ್ಯಕರ್ತರು, ನಾಯಕರು ಒಟ್ಟಾಗಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುತ್ತಿದ್ದಾರೆ ಅಭ್ಯರ್ಥಿ ಮಿಥುನ್ ರೈ ಗೆಲುವು ನಿಶ್ಚಿತ  ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯ ಬ್ಯಾಂಕ್ ವಿಲೀನಕ್ಕೆ ವಿರೋಧ: ನಮ್ಮ ಜಿಲ್ಲೆಯಲ್ಲಿ ಹುಟ್ಟಿದ ಬ್ಯಾಂಕ್‌ನ್ನು ಗುಜರಾತಿನ ಹೆಸರು ಬರುವ ಬ್ಯಾಂಕ್‌ಗೆ ವಿಲೀನ ಮಾಡುವುದು ಸರಿಯಲ್ಲ, ನಷ್ಟದಲ್ಲಿರುವ ಬ್ಯಾಂಕಿಗೆ ನಮ್ಮೂರಿನ ಬ್ಯಾಂಕ್ ವಿಲೀನ ಮಾಡಿರುವುದು ತುಂಬಾ ಬೇಸರ ತಂದಿದೆ.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನೋಣಯ ಪೂಜಾರಿ,  ಪುರಸಭಾ ಸದಸ್ಯ ಮಹಮ್ಮದ್ ಶರೀಫ್,  ಪಕ್ಷದ ಮುಖಂಡರಾದ ಸದಾಶಿವ ಬಂಗೇರ,  ಉಮ್ಮರ್, ಸ್ಟೀವನ್ ಡಿಸೋಜ, ಗೋಪಾಲಕೃಷ್ಣ ಸುವರ್ಣ, ಇಕ್ಬಾಲ್ ಫರಂಗಿಪೇಟೆ,  ಹಂಝ, ಕರೀಂ ಬೊಳ್ಳಾಯಿ, ಬಾಲಚಂದ್ರ ಶೆಟ್ಟಿ, ಶ್ರೀಧರ ಅಮೀನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...