Saturday, January 24, 2026

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು ಬೆಳಗ್ಗೆ 9:32ರ ಮೀನ ಲಗ್ನ ಸುಮೂರ್ತದಲ್ಲಿ ರವಿ ಶಾಂತಿ ಇವರ ಪೌರೋಹಿತ್ಯದಲ್ಲಿ ಅಶೋಕ್ ಶಾಂತಿ ಇವರ ನೇತೃತ್ವದಲ್ಲಿ ತೈಲ ತರವಾಡು ಮನೆಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಈ ಕಾರ್ಯಕ್ರಮದಲ್ಲಿ ಊರಿನ ಗುರಿಕಾರರಾದ ಸದಾನಂದ ಪೂಜಾರಿ, ದೇನ್ತೊಟ್ಟು ಗುತ್ತು ಮನೆಯ ಗುರಿಕಾರರಾದ ರಮೇಶ್ ಪೂಜಾರಿ, ಕೋರೊಟ್ಟು ಗುತ್ತು ಮನೆಯ ಸುದೀರ್ ಶೆಟ್ಟಿ, ಕಲಾಯ ಗುತ್ತು ಮನೆಯ ಚಿದಾನಂದ ಪೂಜಾರಿ, ಕರಂಗಿಲ್ ಗುತ್ತು ಸುಧಾಕರ ಪೂಜಾರಿ ಹಾಗೂ ಕೈಲಾ ತರವಾಡಿನ ಹಿರಿಯರಾದ ಸುಂದರ ಪೂಜಾರಿ ಬಲ್ಲಮಂಜ, ವೆಂಕಪ್ಪ ಪೂಜಾರಿ ಸುಲ್ಕೇರಿ ಮತ್ತು ಹಿರಿಯರು, ಮಹಿಳೆಯರು, ಮತ್ತು ಕುಟುಂಬಸ್ಥರು ಹಾಗೂ ಟ್ರಸ್ಟಿನ ಅಧ್ಯಕ್ಷರಾದ ಕುಶಾಲ ಕೈಲಾ ಕಾರ್ಯದರ್ಶಿಗಳಾದ ತಾರಾನಾಥ್ ಕಜೇಕಾರ್, ಕೋಶಾಧಿಕಾರಿಗಳಾದ ಹರೀಶ್ ಪಚ್ಚಾಜೆ , ಹಾಗೂ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...