Friday, February 14, 2025

ಫೆ.17ರಿಂದ ಹೊರ ಗುತ್ತಿಗೆ ಕಂಪ್ಯೂಟರ್ ಆಪರೇಟರ್‌ಗಳ ಮುಷ್ಕರ

ಪುತ್ತೂರು: ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನೋಂದಣಿ ಹಾಗೂ ಉಪ-ನೋಂದಣಿ ಕಛೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(ಕಾವೇರಿ ಯೋಜನೆ) ಹೊರ ಗುತ್ತಿಗೆ ಕಂಪ್ಯೂಟರ್ ಆಪರೇಟರ್‌ಗಳ ರಾಜ್ಯ ಸಂಘದಿಂದ ಫೆ.೧೭ರಿಂದ ಮುಷ್ಕರ ಆರಂಭಗೊಳ್ಳಲಿದ್ದು ದ.ಕ.ಜಿಲ್ಲೆಯ ಎಲ್ಲಾ ತಾಲೂಕುಗಳ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹೊರ ಗುತ್ತಿಗೆ ಕಂಪ್ಯೂಟರ್ ಆಪರೇಟರ್‌ಗಳಿಂದ ಜಿಲ್ಲಾ ನೋಂದಣಿ ಕಛೇರಿಯ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಜಿಲ್ಲಾ ನೋಂದಣಿ ಹಾಗೂ ಉಪ-ನೋಂದಣಿ ಕಛೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕಂಪ್ಯೂಟರ್ ಆಪರೇಟರ್‌ಗಳ ವಿವಿಧ ಬೇಡಿಕೆಗಳನ್ನು ಫೆ.೧೫ರೊಳಗೆ ಈಡೇರಿಸದೆ ಇದ್ದಲ್ಲಿ ಆಯಾ ಜಿಲ್ಲೆಯ ಜಿಲ್ಲಾ ನೋಂದಣಿ ಕಚೇರಿಯ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ, ಗುತ್ತಿಗೆ ಪಡೆದ ಸಿ.ಎಮ್.ಎಸ್ ಕಂಪೆನಿಯವರಿಗೆ, ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಸಚಿವರಿಗೆ ಈಗಾಗಲೇ ಮನವಿ ಮಾಡಿ ತಿಳಿಸಲಾಗಿದೆ.

ಆದರೆ ಇಲ್ಲಿಯವರೆಗೆ ಸರಕಾರದಿಂದ, ಇಲಾಖೆ ಮುಖ್ಯಸ್ಥರಿಂದ ಹಾಗೂ ಗುತ್ತಿಗೆ ಪಡೆದ ಕಂಪೆನಿಯಿಂದ ಯಾವುದೇ ಸ್ಪಂದನೆ ಸಿಗದ ಕಾರಣ ಫೆ.೧೭ರಿಂದ ಆಯಾ ಜಿಲ್ಲೆಯ ಜಿಲ್ಲಾ ನೋಂದಣಿ ಕಛೇರಿಯ ಮುಂದೆ ಹೋರಾಟ ಮಾಡುವುದು ಆನಿವಾರ್ಯವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಡಿಕೆಗಳು: ಪೇಮೆಂಟ್ ಆಫ್ ವೇಜಸ್ ಆಕ್ಟ್ ೧೯೩೬ರ ಮೇರೆಗೆ ಗುತ್ತಿಗೆ ನೌಕರರಿಗೆ ಪ್ರತೀ ತಿಂಗಳು ೭ನೇ ದಿನಾಂಕದ ಒಳಗಾಗಿ ವೇತನ ವಿತರಿಸಬೇಕು. ಆದರೆ ಗುತ್ತಿಗೆ ಪಡೆದ ಕಂಪೆನಿಯವರು ೫ ತಿಂಗಳಾದರೂ ವೇತನ ಬಟವಾಡೆ ಮಾಡಿರುವುದಿಲ್ಲ. ಈ ದುಸ್ಥಿತಿಯನ್ನು ನಿವಾರಿಸಿ ಪ್ರತೀ ತಿಂಗಳು ಸಕಾಲಕ್ಕೆ ಸಂಬಳ ಬಟವಾಡೆ ಮಾಡಬೇಕು.

ಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಪೂರ್ವಾನ್ವಯವಾಗುವಂತೆ ಜಾರಿಗೊಳಿಸಿ ಸರಕಾರ ಆದೇಶ ನೀಡಬೇಕು. ಗುತ್ತಿಗೆ ಡಾಟಾ ಎಂಟ್ರಿ ಆಪರೇಟರ್‌ಗಳು ಯಾವುದೇ ಕೆಲಸದ ದಿನ ನಿಯಮಿತ ೮ ಗಂಟೆಗಳಿಗಿಂತ ಹೆಚ್ಚು ಕಾಲ ಕೆಲಸ ಮಾಡುವುದು ಅನಿವಾರ್ಯವಾಗಿದ್ದು ಹೆಚ್ಚುವರಿ ಸೇವೆಗೆ ಸಿಗುವ ಓವರ್ ಟೈಮ್ ಅಲಯನ್ಸ್‌ನಿಂದ ವಂಚಿತರಾಗಿರುತ್ತಾರೆ. ಪ್ರತೀ ಕಛೇರಿಯಲ್ಲಿ ಸ್ಥಾಪಿಸಿರುವ ಬಯೋಮೆಟ್ರಿಕ್ ಸಿಸ್ಟಮ್‌ನಲ್ಲೇ ಗುತ್ತಿಗೆ ನೌಕರರ ಹಾಜರಾತಿ ದಾಖಲಾಗುತ್ತಿರುವುದರಿಂದ ಹೆಚ್ಚುವರಿ ಕೆಲಸಕ್ಕೆ ಓವರ್ ಟೈಮ್ ಅಲಯನ್ಸ್ ಕಾನೂನು ಮೇರೆಗೆ ಲಭಿಸುವಂತೆ ಮಾಡಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ಮಾಡಲಿದ್ದಾರೆ.

ಪುತ್ತೂರು ಸೇರಿದಂತೆ ದ.ಕ.ಜಿಲ್ಲೆಯ ೭ ತಾಲೂಕಿನ ಹೊರ ಗುತ್ತಿಗೆ ಕಂಪ್ಯೂಟರ್ ಆಪರೇಟರ್‌ಗಳು ಭಾಗಿದ.ಕ.ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ವಿಟ್ಲ, ಮಂಗಳೂರು, ಮೂಡಬಿದ್ರೆ ತಾಲೂಕುಗಳ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(ಕಾವೇರಿ ಯೋಜನೆ) ಹೊರ ಗುತ್ತಿಗೆ ಕಂಪ್ಯೂಟರ್ ಆಪರೇಟರ್‌ಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

More from the blog

ಫೆ. 15ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರೆ

ಪೆರಾಜೆ ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಕಾರ್ಯಕ್ರಮವು ಫೆಬ್ರವರಿ 15ರಂದು ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬೆಳಗ್ಗೆ ಗಣಪತಿ ಹವನ ಹಾಗೂ ವಿವಿಧ ವೈದಿಕ ಹೋಮಗಳು ಮಧ್ಯಾಹ್ನ ಮಹಾಪೂಜೆ ಅನ್ನ ಸಂತರ್ಪಣೆ...

ಮಕ್ಕಳ ಹೆಸರು ಬದಲಾವಣೆಗೆ ಕೋರ್ಟ್ ನಲ್ಲಿ ದಾವೆ ಹೂಡಬೇಕಾಗಿಲ್ಲ

ಬೆಂಗಳೂರು: ಮಕ್ಕಳ ಹೆಸರು ಬದಲಾವಣೆಗೆ ಇನ್ನು ಮುಂದೆ ನ್ಯಾಯಾಲಯದಲ್ಲಿ ದಾವೆ ಹೂಡಬೇಕಾಗಿಲ್ಲ ಎಂಬ ಮಹತ್ತರವಾದ ತೀರ್ಪನ್ನು ಕರ್ನಾಟಕ ಉಚ್ಚನ್ಯಾಯಾಲಯ ಹೊರಡಿಸಿದೆ. ರಿಜಿಸ್ಟ್ರಾರದ ನಿರಾಕರಣೆ ನ್ಯಾಯಸಮ್ಮತವಲ್ಲ : ಜನನ ಪ್ರಮಾಣಪತ್ರದ ತಿದ್ದುಪಡಿಯ ಕುರಿತು ರಿಜಿಸ್ಟ್ರಾರ್ ನೀಡಿದ ನಿರಾಕರಣೆ,...

ಮುಲ್ಕಜೆಮಾಡ ಶ್ರೀ ಉಳ್ಳಾಳ್ತಿ ಉಳ್ಳಾಕ್ಲು ಕ್ಷೇತ್ರದ ಪೂರ್ವಭಾವಿ ಸಭೆ

ಬಂಟ್ವಾಳ :  ತಾಲೂಕಿನ ದೇವಸ್ಯಮೂಡುರು ಗ್ರಾಮದ ಮುಲ್ಕಜೆಮಾಡ ಶ್ರೀ ಉಳ್ಳಾಳ್ತಿ ಉಳ್ಳಾಕ್ಲು ಕ್ಷೇತ್ರ ಇದರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಶೇಕ ಹಾಗೂ ನೇಮೋತ್ಸವದ ಪ್ರಯುಕ್ತ ಫೆ. 13ರಂದು ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ...

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

  ಬೆಂಗಳೂರು:    ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ...