Thursday, February 13, 2025

ಪುಣಚ ಬಳಂತಿಮೊಗರು ಶ್ರೀ ದೈವಗಳ ಬ್ರಹ್ಮಕಲಶೋತ್ಸವ, ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಪ್ರತಿಯೊಬ್ಬರ ಸಹಕಾರ, ಕೂಡುವಿಕೆಯಿಂದ ಬ್ರಹ್ಮಕಲಶೋತ್ಸವ ಯಶಸ್ವಿಯಾಗುವುದು. ಪ್ರತಿಯೊಬ್ಬರು ಏಕ ಮನಸ್ಸಿನಿಂದ ಸಹಭಾಗಿಗಳಾಗಬೇಕು. ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಬಳಂತಿಮೊಗರು ಶ್ರೀ ದೈವಗಳ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ ತಿಳಿಸಿದರು.

ಅವರು ಗುರುವಾರ ಎ.೧೫-ರಿಂದ ೨೦ರ ತನಕ ನಡೆಯುವ ಪುಣಚ ಗ್ರಾಮದ ಬಳಂತಿಮೊಗರು ಶ್ರೀಮಲರಾಯ, ಮಹಿಷಂದಾಯ, ಧೂಮಾವತಿ, ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ನೆತ್ತರ್‌ಕಣ ಮತ್ತು ಪರಿವಾರ ದೈವಗಳ ದೈವಸ್ಥಾನಗಳ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಜ್ಪೆ ಏರ್‌ಪೋರ್ಟ್‌ನ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪದ್ಮನಾಭ ಪಿ.ಎಸ್. ಮಾತನಾಡಿ ಎಲ್ಲರೂ ಕಾರ್ಯಕರ್ತರಂತೆ ದುಡಿದಾಗ ಬ್ರಹ್ಮಕಲಶೋತ್ಸವದಂತಹ ದೊಡ್ಡ ಕಾರ್ಯಗಳೂ ನಿರಾಳವಾಗಿ ನಡೆಯುವುದು ಎಂದರು.
ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಿ. ರಾಮಕೃಷ್ಣ ಶಾಸ್ತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಗೋಪಾಲ ಕೆಮ್ಮಿಂಜೆ, ಮಾರ್ಗದರ್ಶಕ ಮಂಡಳಿಯ ವಿಶ್ವನಾಥ ಭಟ್ ಮುಂಡೋವು, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಗಣೇಶ ಪೂಜಾರಿ ಉಪಸ್ಥಿತರಿದ್ದರು.
ಸಮಿತಿಯ ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿದರು. ಅಭಿಷೇಕ್ ವಂದಿಸಿದರು. ರವಿಚಂದ್ರ ಬಳಂತಿಮೊಗರು ಕಾರ್ಯಕ್ರಮ ನಿರೂಪಿಸಿದರು.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...