Wednesday, January 28, 2026

ಪುಣಚ ಬಳಂತಿಮೊಗರು ಶ್ರೀ ದೈವಗಳ ಬ್ರಹ್ಮಕಲಶೋತ್ಸವ, ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಪ್ರತಿಯೊಬ್ಬರ ಸಹಕಾರ, ಕೂಡುವಿಕೆಯಿಂದ ಬ್ರಹ್ಮಕಲಶೋತ್ಸವ ಯಶಸ್ವಿಯಾಗುವುದು. ಪ್ರತಿಯೊಬ್ಬರು ಏಕ ಮನಸ್ಸಿನಿಂದ ಸಹಭಾಗಿಗಳಾಗಬೇಕು. ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಬಳಂತಿಮೊಗರು ಶ್ರೀ ದೈವಗಳ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಮಚಂದ್ರ ಮಣಿಯಾಣಿ ತಿಳಿಸಿದರು.

ಅವರು ಗುರುವಾರ ಎ.೧೫-ರಿಂದ ೨೦ರ ತನಕ ನಡೆಯುವ ಪುಣಚ ಗ್ರಾಮದ ಬಳಂತಿಮೊಗರು ಶ್ರೀಮಲರಾಯ, ಮಹಿಷಂದಾಯ, ಧೂಮಾವತಿ, ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ನೆತ್ತರ್‌ಕಣ ಮತ್ತು ಪರಿವಾರ ದೈವಗಳ ದೈವಸ್ಥಾನಗಳ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಜ್ಪೆ ಏರ್‌ಪೋರ್ಟ್‌ನ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪದ್ಮನಾಭ ಪಿ.ಎಸ್. ಮಾತನಾಡಿ ಎಲ್ಲರೂ ಕಾರ್ಯಕರ್ತರಂತೆ ದುಡಿದಾಗ ಬ್ರಹ್ಮಕಲಶೋತ್ಸವದಂತಹ ದೊಡ್ಡ ಕಾರ್ಯಗಳೂ ನಿರಾಳವಾಗಿ ನಡೆಯುವುದು ಎಂದರು.
ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಿ. ರಾಮಕೃಷ್ಣ ಶಾಸ್ತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಗೋಪಾಲ ಕೆಮ್ಮಿಂಜೆ, ಮಾರ್ಗದರ್ಶಕ ಮಂಡಳಿಯ ವಿಶ್ವನಾಥ ಭಟ್ ಮುಂಡೋವು, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಗಣೇಶ ಪೂಜಾರಿ ಉಪಸ್ಥಿತರಿದ್ದರು.
ಸಮಿತಿಯ ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿದರು. ಅಭಿಷೇಕ್ ವಂದಿಸಿದರು. ರವಿಚಂದ್ರ ಬಳಂತಿಮೊಗರು ಕಾರ್ಯಕ್ರಮ ನಿರೂಪಿಸಿದರು.

 

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...