Thursday, February 13, 2025

ಪುಣಚ: ಬೈಲುಗುತ್ತು ನೇಮೋತ್ಸವದಲ್ಲಿ ಸನ್ಮಾನ

ಪುಣಚ: ಗ್ರಾಮದ ಬೈಲುಗುತ್ತು ಧರ್ಮದೈವಗಳ ವರ್ಷಾವಧಿ ನೇಮೋತ್ಸವದ ಸಂದರ್ಭದಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಕುಕ್ಕಾಡಿ ಬಾಲಕೃಷ್ಣ ಶೆಟ್ಟಿ ಸಾರಥ್ಯದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ನಟಿ ನಾಟ್ಯ ಚತುರೆ ಭವ್ಯಶ್ರೀ ರೈ ಅವರಿಂದ ನೃತ್ಯ ವೈಭವ ಮತ್ತು ಡ್ಯಾನ್ಸ್ ಡ್ಯಾನ್ಸ್ ಖ್ಯಾತಿಯ ಪೆನ್ಸಿಲ್ ಬಾಕ್ಸ್ ಚಲನಚಿತ್ರ ನಟಿ ದೀಕ್ಷಾ ಡಿ. ರೈ ಮತ್ತು ಬಳಗದವರಿಂದ ಮನೋರಂಜನಾ ಕಾರ್ಯಕ್ರಮ ಪ್ರದರ್ಶನಗೊಂಡಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭವ್ಯಶ್ರೀ ರೈ ಮತ್ತು ಅವರ ಪತಿ ಚಲನಚಿತ್ರ ನಟ ಸುರೇಶ್ ರೈ ಬೈಲುಗುತ್ತು ಮತ್ತು ದೀಕ್ಷಾ ಡಿ ರೈ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಬಂಬ್ರಾಣ ಮನೆತನದ ಯಜಮಾನ ಮೋಹನದಾಸ ರೈ, ಕುಕ್ಕಾಡಿ ಬಾಲಕೃಷ್ಣ ಶೆಟ್ಟಿ ಮತ್ತು ಜಗನ್ನಾಥ ರೈ ಬೈಲುಗುತ್ತು, ಪ್ರಪುಲ್ಲಾ ಜೆ ರೈ, ವಿಠಲ ರೈ ಬೈಲುಗುತ್ತು, ಜಯಂತಿ ರೈ ಬೈಲುಗುತ್ತು, ಮಾರಪ್ಪ ಶೆಟ್ಟಿ ಬೈಲುಗುತ್ತು, ಸದಾಶಿವ ರೈ ಬೈಲುಗುತ್ತು ಉಪಸ್ಥಿತರಿದ್ದರು.
ಶ್ರೀದೇವಿ ಸ್ವಾಗತಿಸಿದರು. ರಾಜೇಂದ್ರ ರೈ ವಂದಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...