Friday, June 27, 2025

ಪುಣಚ ಶ್ರೀ ಮಹಿಷಮರ್ದಿನಿ ದೇಗುಲದಲ್ಲಿ ಜಾತ್ರೋತ್ಸವ ಧ್ವಜಾರೋಹಣ

ಪುಣಚ : ಶ್ರೀಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಭಾನುವಾರ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು. ಧ್ವಜಾರೋಹಣದ ಬಳಿಕ ದೇವರ ನಿತ್ಯ ಬಲಿ, ಭೂತ ಬಲಿ ಉತ್ಸವ ನಡೆಯಿತು. ಅನ್ನಂಸಂತರ್ಪಣೆ, ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಅರಮನೆ ಅನುವಂಶಿಕ ಮೊಕ್ತೇಸರ ಪ್ರತಿನಿಧಿ ನಂದವರ್ಮ, ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್. ಆರ್. ರಂಗಮೂರ್ತಿ, ಉಪಾಧ್ಯಕ್ಷರಾದ ಮಾರಪ್ಪ ಶೆಟ್ಟಿ, ಕಾರ್‍ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಕೋಶಾಧಿಕಾರಿ ಶಂಕರ್ ನಾರಾಯಣ ಭಟ್ ಮಲ್ಯ, ಆಡಳಿತ ಮಂಡಳಿ ಸದಸ್ಯರು, ಹಾಗೂ ಊರಪರವೂರ ಭಕ್ತರು ಭಾಗವಹಿಸಿದ್ದರು.
ಜಾತ್ರೋತ್ಸವದ ಅಂಗವಾಗಿ ಎ.8 ರಂದು ದೀಪ ಬಲಿ, ದರ್ಶನ ಬಲಿ, ಭೂತ ಬಲಿ ಉತ್ಸವ, ದೀಪ ಬಲಿ, ದರ್ಶನ ಬಲಿ, ಭೂತಬಲಿ, ಕೆರೆಕಟ್ಟೆ ಉತ್ಸವ, ಎ.10 ರಂದು ದೀಪ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಉತ್ಸವ ಬಲಿ, ದರ್ಶನ ಬಲಿ, ಬೆಡಿಕಟ್ಟೆ ಉತ್ಸವ, ಸಿಡಿಮದ್ದು ಪ್ರದರ್ಶನ, ಮೃಗಬೇಟೆ ಸವಾರಿ, ಭೂತಬಲಿ, ಎ.11 ರಂದು ಕವಾಟೋದ್ಘಾಟನೆ, ತುಲಾಭಾರ ಸೇವೆ, ರಾತ್ರಿ ಪಡುಪೇಟೆ ಸವಾರಿ, ಅವಭೃತ ಸ್ನಾನ, ಬಟ್ಟಲು ಕಾಣಿಕೆಯ ಬಳಿಕ ಧ್ವಜಾವರೋಹಣ ನಡೆಯಲಿದೆ. ಇದೇ ಸಂದರ್ಭದಲ್ಲಿ ಪ್ರತೀದಿನ ದೇಗುಲದ ಮುಂಭಾಗದ ಗದ್ದೆಯಲ್ಲಿರುವ ಬಯಲು ರಂಗಮಂದಿರದಲ್ಲಿ ನಾನಾ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆಯಲಿವೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...