Wednesday, February 12, 2025

’ಸುಳ್ಳು, ಮೋಸಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ’- ಅರುಣ್‌ಕುಮಾರ್ ಪುತ್ತಿಲ

ವಿಟ್ಲ: ನಿರಂತರ ಜನರಲ್ಲಿ ಸುಳ್ಳು ಹೇಳಿಕೊಂಡು ಮೋಸ ಮಾಡುತ್ತಿದ್ದ ಕಾಂಗ್ರೆಸ್ ಈ ಬಾರಿಯ ಲೋಕಸಭೆಯ ಚುನಾವಣೆಯ ಬಳಿಕ ಹೇಳಹೆಸರಿಲ್ಲದಂತಾಗಿದೆ. ಇನ್ನು ಕನಿಷ್ಠ 25 ವರ್ಷಗಳ ಕಾಲ ಕೇಂದ್ರದಲ್ಲಿ ಎನ್‌ಡಿಎ ಆಡಳಿತಕ್ಕೆ ಯಾವುದೇ ಆತಂಕವಿಲ್ಲ ಎಂದು ಹಿಂದೂ ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಅವರು ಗುರುವಾರ ರಾತ್ರಿ ಪುಣಚ ಪರಿಯಾಲ್ತಡ್ಕ ಜಂಕ್ಷನ್‌ನಲ್ಲಿ ನಡೆದ ಕಾರ್‍ಯಕರ್ತರಿಗೆ ಅಭಿನಂದನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜಗತ್ತಿನ ಪ್ರಭಾವಿ ರಾಷ್ಟ್ರಗಳೇ ಹುಬ್ಬೇರಿಸುವಂತೆ ಮಾಡಿದ ನರೇಂದ್ರ ಮೋದಿಯನ್ನು ಇಲ್ಲಸಲ್ಲದ ಕೀಳು ಮಟ್ಟದ ನಿಂದನೆ, ಟೀಕೆ ಮಾಡಿದ ಕಾಂಗ್ರೆಸ್, ಹಾಗೂ ದೇಶದ ನಾನಾ ರಾಷ್ಟ್ರೀಯ ಮತ್ತು ನಾನಾ ಪ್ರಾದೇಶಿಕ ಪಕ್ಷಗಳಿಗೆ ಮೋದಿ ಟೀಕೆಯ ಪರಿಣಾಮವನ್ನು ಜನರೇ ತಿಳಿಸಿಕೊಟ್ಟಿದ್ದಾರೆ. ಕೊಳ್ನಾಡು ಜಿಲ್ಲಾ ಪಂಚಾಯಿತಿ ಸದಸ್ಯ ಚುನಾವಣೆಯ ಪೂರ್ವದಲ್ಲಿ ಬಿಗಿದ ಕೀಳು ರಾಜಕೀಯ ಭಾಷಣ ಬಿಜೆಪಿಯ ಗೆಲುವಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಿಲ್ಲ ಎಂದು ತಿಳಿಸಿದ ಅವರು ಇನ್ನು ೫ ವರ್ಷಗಳಲ್ಲಿ ಜಗತ್ತೇ ಅಚ್ಚರಿಯಿಂದ ನೋಡುವ ರೀತಿಯಲ್ಲಿ ದೇಶದ ಚಿತ್ರಣ ಬದಲಾವಣೆಯಾಗಲಿದೆ ಎಂದರು.
ಹಿಂದೂ ಮುಖಂಡರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಬಜರಂಗ ದಳದ ಮುಖಂಡ ಮುರಳೀಕೃಷ್ಣ ಹಸಂತಡ್ಕ, ಬಿಜೆಪಿ ತಾಲೂಕು ಮಂಡಲದ ಕಾರ್‍ಯದರ್ಶಿ ರಾಮಕೃಷ್ಣ ಮೂಡಂಬೈಲು ಮಾತನಾಡಿದರು.
ಪುಣಚ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಎಂ. ದಲ್ಕಜೆಗುತ್ತು ಸ್ವಾಗತಿಸಿದರು. ಕಾರ್‍ಯದರ್ಶಿ ಪ್ರವೀಣ್ ಕುಮಾರ್ ಬೊಳ್ಳರಡ್ಕ ವಂದಿಸಿದರು. ಜಗದೀಶ್ ಮಾರಮಜಲು ಕಾರ್‍ಯಕ್ರಮ ನಿರೂಪಿಸಿದರು.

 

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...