Thursday, July 10, 2025

’ಸುಳ್ಳು, ಮೋಸಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ’- ಅರುಣ್‌ಕುಮಾರ್ ಪುತ್ತಿಲ

ವಿಟ್ಲ: ನಿರಂತರ ಜನರಲ್ಲಿ ಸುಳ್ಳು ಹೇಳಿಕೊಂಡು ಮೋಸ ಮಾಡುತ್ತಿದ್ದ ಕಾಂಗ್ರೆಸ್ ಈ ಬಾರಿಯ ಲೋಕಸಭೆಯ ಚುನಾವಣೆಯ ಬಳಿಕ ಹೇಳಹೆಸರಿಲ್ಲದಂತಾಗಿದೆ. ಇನ್ನು ಕನಿಷ್ಠ 25 ವರ್ಷಗಳ ಕಾಲ ಕೇಂದ್ರದಲ್ಲಿ ಎನ್‌ಡಿಎ ಆಡಳಿತಕ್ಕೆ ಯಾವುದೇ ಆತಂಕವಿಲ್ಲ ಎಂದು ಹಿಂದೂ ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಅವರು ಗುರುವಾರ ರಾತ್ರಿ ಪುಣಚ ಪರಿಯಾಲ್ತಡ್ಕ ಜಂಕ್ಷನ್‌ನಲ್ಲಿ ನಡೆದ ಕಾರ್‍ಯಕರ್ತರಿಗೆ ಅಭಿನಂದನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜಗತ್ತಿನ ಪ್ರಭಾವಿ ರಾಷ್ಟ್ರಗಳೇ ಹುಬ್ಬೇರಿಸುವಂತೆ ಮಾಡಿದ ನರೇಂದ್ರ ಮೋದಿಯನ್ನು ಇಲ್ಲಸಲ್ಲದ ಕೀಳು ಮಟ್ಟದ ನಿಂದನೆ, ಟೀಕೆ ಮಾಡಿದ ಕಾಂಗ್ರೆಸ್, ಹಾಗೂ ದೇಶದ ನಾನಾ ರಾಷ್ಟ್ರೀಯ ಮತ್ತು ನಾನಾ ಪ್ರಾದೇಶಿಕ ಪಕ್ಷಗಳಿಗೆ ಮೋದಿ ಟೀಕೆಯ ಪರಿಣಾಮವನ್ನು ಜನರೇ ತಿಳಿಸಿಕೊಟ್ಟಿದ್ದಾರೆ. ಕೊಳ್ನಾಡು ಜಿಲ್ಲಾ ಪಂಚಾಯಿತಿ ಸದಸ್ಯ ಚುನಾವಣೆಯ ಪೂರ್ವದಲ್ಲಿ ಬಿಗಿದ ಕೀಳು ರಾಜಕೀಯ ಭಾಷಣ ಬಿಜೆಪಿಯ ಗೆಲುವಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಿಲ್ಲ ಎಂದು ತಿಳಿಸಿದ ಅವರು ಇನ್ನು ೫ ವರ್ಷಗಳಲ್ಲಿ ಜಗತ್ತೇ ಅಚ್ಚರಿಯಿಂದ ನೋಡುವ ರೀತಿಯಲ್ಲಿ ದೇಶದ ಚಿತ್ರಣ ಬದಲಾವಣೆಯಾಗಲಿದೆ ಎಂದರು.
ಹಿಂದೂ ಮುಖಂಡರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಬಜರಂಗ ದಳದ ಮುಖಂಡ ಮುರಳೀಕೃಷ್ಣ ಹಸಂತಡ್ಕ, ಬಿಜೆಪಿ ತಾಲೂಕು ಮಂಡಲದ ಕಾರ್‍ಯದರ್ಶಿ ರಾಮಕೃಷ್ಣ ಮೂಡಂಬೈಲು ಮಾತನಾಡಿದರು.
ಪುಣಚ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಎಂ. ದಲ್ಕಜೆಗುತ್ತು ಸ್ವಾಗತಿಸಿದರು. ಕಾರ್‍ಯದರ್ಶಿ ಪ್ರವೀಣ್ ಕುಮಾರ್ ಬೊಳ್ಳರಡ್ಕ ವಂದಿಸಿದರು. ಜಗದೀಶ್ ಮಾರಮಜಲು ಕಾರ್‍ಯಕ್ರಮ ನಿರೂಪಿಸಿದರು.

 

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...